HomeಮುಖಪುಟTRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗಾಗಿ ಅರ್ನಾಬ್ ಗೋಸ್ವಾಮಿಗೆ ಅವರಿಗೆ ಯಾವುದೇ ವಿಶೇಷ ಅವಕಾಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಇಡೀ ದೇಶದ ಗಮನ ಸೆಳೆದಿರುವ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಆಂಗ್ಲ ಸುದ್ದಿ ಮಾಧ್ಯಮವಾದ ರಿಪಬ್ಲಿಕ್‌ ಚಾನೆಲ್‌ನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಇದೀಗ ಪೇಚಿಗೆ ಸಿಲುಕಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಂಬೆ ಹೈಕೋರ್ಟ್‌‌ಗೆ ಸ್ಪಷ್ಟನೆ ನೀಡಿರುವ ಮುಂಬೈ ಅಪರಾಧ ವಿಭಾಗದ ಪೊಲೀಸರು ವಿಚಾರಣೆ ಹಾಜರಾಗುವಂತೆ ಅರ್ನಾಬ್‌ ಗೋಸ್ವಾಮಿ ಅವರಿಗೆ ಸಮನ್ಸ್‌ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಹಿಂದೆ ರಿಪಬ್ಲಿಕ್ ಟಿವಿಯ ಸಿಇಓ ವಿಕಾಸ್ ಖಾಂಚಂದಾನಿ ಅವರನ್ನು ಸಹ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಈಗಾಗಲೇ ಅನೇಕರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ರಿಪಬ್ಲಿಕ್‌ ಟಿವಿ ಸಂಪಾದಕ 46 ವರ್ಷದ ಅರ್ನಾಬ್ ಗೋಸ್ವಾಮಿ ಸಹ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ತಮ್ಮನ್ನು ಪೊಲೀಸರು ಬಂಧಿಸದಂತೆ ಹಾಗೂ ಬಲವಂತದ ಯಾವುದೇ ಕ್ರಮಗಳನ್ನು ಜರುಗಿಸದಂತೆ ಆದೇಶಿಸಬೇಕು ಎಂದು ಒತ್ತಾಯಿಸಿ ಬಾಂಬೆ ಕೋರ್ಟ್‌‌ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಇಂದು ವಿಚಾರಣೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಈ ವೇಳೆ ಮುಂಬೈ ಪೊಲೀಸರ ಪರವಾಗಿ ಕೋರ್ಟ್‌‌ಗೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌, “ಟಿಆರ್‌ಪಿ ತಿರುಚಿದ ಹಗರಣದಲ್ಲಿ ಅರ್ನಾಬ್ ಗೋಸ್ವಾಮಿ ಅವರೂ ಸಹ ಪ್ರಮುಖ ಆರೋಪಿ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗಾಗಿ ಅರ್ನಾಬ್ ಗೋಸ್ವಾಮಿಗೆ ಅವರಿಗೆ ಯಾವುದೇ ವಿಶೇಷ ಅವಕಾಶಗಳನ್ನು ನೀಡುವುದು ಸಾಧ್ಯವಿಲ್ಲ. ಪೊಲೀಸರಿಗೆ ಅಗತ್ಯವಿದ್ದರೆ ಅವರನ್ನೂ ಸಹ ವಿಚಾರಣೆಗೆ ಒಳಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ. ಈ ಮೂಲಕ ಸಂಪಾದಕ ಅರ್ನಾಬ್ ಗೋಸ್ವಾಮಿ ಯಾವುದೇ ಸಂದರ್ಭದಲ್ಲಿ ಬಂಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೋರ್ಟ್‌ ವಿಚಾರಣೆ ವೇಳೆ ಅರ್ನಾಬ್ ಗೋಸ್ವಾಮಿ ಪರವಾಗಿ ಹಾಜರಾದ ಅವರ ಸಲಹೆಗಾರ ಹಾಗೂ ಹಿರಿಯ ವಕೀಲ ಹರೀಶ್‌ ಸಾಲ್ವೆ, “ಮುಂಬೈ ಪೊಲೀಸರು ಸಮನ್ಸ್‌ ಜಾರಿ ಮಾಡಿದರೆ ನಾವು ಅದನ್ನು ಗೌರವಿಸುತ್ತೇವೆ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಿಪಬ್ಲಿಕ್
PC: Picuki

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ಟಿಆರ್‌‌ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನೋಂದಾಯಿಸಿದ FIR ನ್ನು ರದ್ದುಪಡಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಮತ್ತು ಆರ್ ಭಾರತ್ ನ್ಯೂಸ್ ಚಾನೆಲ್‌ಗಳ ಮಾತೃಸಂಸ್ಥೆಯಾದ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌ಎಸ್ ಶಿಂಧೆ ಮತ್ತು ಮಕರಂದ್ ಕಾರ್ನಿಕ್ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಟಿಆರ್‌ಪಿಗಳನ್ನು ಅಳೆಯುವ ಉದ್ದೇಶದಿಂದ ಅಳವಡಿಸಿದ ಬಾರೋಮೀಟರ್‌ಗಳನ್ನು ಇರಿಸಿದ ಮನೆಗಳಿಗೆ ಹಣ ನೀಡುವ ಮೂಲಕ ತಮ್ಮ ಚಾನೆಲ್‌ಗಳ ಟಿಆರ್‌ಪಿಯನ್ನು ಮೋಸದಿಂದ ಹೆಚ್ಚಿಸಿದ್ದಾರೆಂದು ಮುಂಬೈ ಅಪರಾಧ ವಿಭಾಗವು ಅಕ್ಟೋಬರ್ 7 ರಂದು ಕಂಡಿವಲಿ ಪೊಲೀಸ್‌ ಠಾಣೆಯಲ್ಲಿ FIR ನೋಂದಾಯಿಸಿತ್ತು.

ಮರುದಿನ ನಡೆದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಂಬೈ ಪೊಲೀಸ್ ಆಯುಕ್ತ (ಸಿಪಿ) ಪರಮ್ ಬಿರ್ ಸಿಂಗ್, ಬಂಧಿತ ಆರೋಪಿಗಳಲ್ಲಿ ಒಬ್ಬ ತಾನು ರಿಪಬ್ಲಿಕ್ ಟಿವಿಯಲ್ಲಿ ಕೆಲಸ ಮಾಡುತ್ತಿರುವುದಾಗಿಯು ಮತ್ತು ವಾಹಿನಿಯ ಟಿಆರ್‌ಪಿಗಳನ್ನು ತಿರುಚಲು ಮನೆಗಳಿಗೆ ಹಣ ಪಾವತಿ ಮಾಡುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ  ಎಂದು ಹೇಳಿದ್ದರು.


ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....