Homeಮುಖಪುಟರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

- Advertisement -
- Advertisement -

ಎರಡು ರಜಾ ದಿನಗಳಲ್ಲಿ ರಿಪಬ್ಲಿಕ್‌ ಟಿವಿಯ ರೇಟಿಂಗ್‌ ಉತ್ತಮವಾಗಿರುವಂತೆ ಟಿಆರ್‌ಪಿಯನ್ನು‌ ಬದಲಾಯಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ತಮಗೆ ಕೊಟ್ಟಿರುವುದಾಗಿ ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಕೈಬರಹದಲ್ಲಿ ಹೇಳಿಕೆ ನೀಡಿದ್ದಾಗಿ ಮುಂಬೈ ಪೊಲೀಸರು ಹೇಳಿದ್ದಾರೆ.

ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್)ನ ಫೋರೆನ್ಸಿಕ್ ಆಡಿಟ್ ವರದಿ, ದಾಸ್‌ಗುಪ್ತಾ ಮತ್ತು ಗೋಸ್ವಾಮಿ ನಡುವೆ ವಾಟ್ಸಾಪ್ ಚಾಟ್‌ಗಳು ಹಾಗೂ ಮಾಜಿ ಕೌನ್ಸಿಲ್ ನೌಕರರು ಮತ್ತು ಕೇಬಲ್ ಆಪರೇಟರ್‌ಗಳು ಸೇರಿದಂತೆ 59 ಜನರ ಹೇಳಿಕೆಗಳುಳ್ಳ 3,600 ಪುಟಗಳ ಟಿಆರ್‌ಪಿ ಹಗರಣ ಪ್ರಕರಣದ ಪೂರಕ ಚಾರ್ಜ್‌ಶೀಟ್‌ ಅನ್ನು ಜನವರಿ 11 ರಂದು ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.

ಲೆಕ್ಕಪರಿಶೋಧನಾ (ಆಡಿಟ್‌) ವರದಿಯಲ್ಲಿ ರಿಪಬ್ಲಿಕ್ ಟಿವಿ, ಟೈಮ್ಸ್ ನೌ ಮತ್ತು ಆಜ್ ತಕ್ ಸೇರಿದಂತೆ ಹಲವಾರು ಸುದ್ದಿ ಚಾನೆಲ್‌ಗಳನ್ನು ಹೆಸರಿಸಲಾಗಿದೆ. ಅಲ್ಲದೆ, ಬಾರ್ಕ್‌ನ ಉನ್ನತ ಅಧಿಕಾರಿಗಳು ಚಾನೆಲ್‌ಗಳಿಗೆ ರೇಟಿಂಗ್‌ಗಳನ್ನು “ಮೊದಲೇ ನಿಗದಿ ಪಡಿಸಿದ್ದಾರೆ” ಎಂದೂ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಪೂರಕ ಚಾರ್ಜ್‌ಶೀಟ್ಅನ್ನು ದಾಸ್‌ಗುಪ್ತಾ, ಮಾಜಿ ಬಾರ್ಕ್ ಸಿಒಒ ರೊಮಿಲ್ ರಾಮ್‌ಗರ್ಹಿಯಾ ಮತ್ತು ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ಸಿಇಒ ವಿಕಾಸ್ ಖನ್‌ಚಂದಾನಿ ವಿರುದ್ಧ ದಾಖಲಿಸಲಾಗಿದೆ. ಇದಕ್ಕೂ ಮೊದಲು 2020 ರ ನವೆಂಬರ್‌ನಲ್ಲಿ 12 ಜನರ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ದಾಸ್‌ಗುಪ್ತಾ ಅವರ ಹೇಳಿಕೆಯನ್ನು 2020 ರ ಡಿಸೆಂಬರ್ 27 ರಂದು ಸಂಜೆ 5.15 ಕ್ಕೆ ಅಪರಾಧ ಗುಪ್ತಚರ ಘಟಕದ ಕಚೇರಿಯಲ್ಲಿ ಇಬ್ಬರು ಸಾಕ್ಷಿಗಳ ಸಮ್ಮುಖದಲ್ಲಿ ದಾಖಲಿಸಲಾಗಿದೆ ಎಂದು ಎರಡನೇ (ಪೂರಕ) ಚಾರ್ಜ್‌ಶೀಟ್ನಲ್ಲಿ ಹೇಳಲಾಗಿದೆ.

ಅರ್ನಾಬ್
PC: News Laundry

ದಾಸ್‌ಗುಪ್ತಾ ಅವರ ಹೇಳಿಕೆಯು ಹೀಗಿದೆ: “ನನಗೆ ಅರ್ನಾಬ್ ಗೋಸ್ವಾಮಿ ಅವರು 2004 ರಿಂದ ಪರಿಚಿತರು. ನಾವು ಟೈಮ್ಸ್ ನೌನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ನಾನು 2013 ರಲ್ಲಿ BARCನ ಸಿಇಒ ಆಗಿ ಸೇರಿಕೊಂಡೆ. ಅರ್ನಾಬ್ ಗೋಸ್ವಾಮಿ ಅವರು 2017 ರಲ್ಲಿ ರಿಪಬ್ಲಿಕ್ ಅನ್ನು ಪ್ರಾರಂಭಿಸಿದರು. ರಿಪಬ್ಲಿಕ್ ಟಿವಿಯನ್ನು ಪ್ರಾರಂಭಿಸುವ ಮೊದಲೇ ಅವರು ನನ್ನೊಂದಿಗೆ ಬ್ರಾಡ್‌ಕಾಸ್ಟಿಂಗ್‌ (ಪ್ರಸಾರ) ಯೋಜನೆಗಳ ಬಗ್ಗೆ ಮಾತನಾಡಿದ್ದರು. ಟಿಆರ್‌ಪಿ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದು ಗೋಸ್ವಾಮಿಗೆ ಚೆನ್ನಾಗಿ ತಿಳಿದಿತ್ತು. ಹಾಗಾಗಿ ಅವರ ಚಾನಲ್‌ಗೆ ಉತ್ತಮ ರೇಟಿಂಗ್ ಪಡೆಯಲು ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡುತ್ತಿದ್ದರು. ಭವಿಷ್ಯದಲ್ಲಿ ನನಗೆ ಸಹಾಯ ಮಾಡಲು ಅವರು ಪ್ರಸ್ತಾಪಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಕ್ಕೆಟ್ಟ ಕಾಲದ ನಿಜದನಿ ನವಮಾಧ್ಯಮ; ಇಂದು ಕಾವಲು ಕಾಯುತ್ತಿರುವ ಮಾಧ್ಯಮಗಳು ಯಾವುವು?

“ರಿಪಬ್ಲಿಕ್ ಟಿವಿಗೆ ನಂಬರ್ 1 ರೇಟಿಂಗ್ ಸಿಗುವಂತೆ ಮಾಡಿದ ಟಿಆರ್‌ಪಿ ರೇಟಿಂಗ್‌ಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ನಾನು ನನ್ನ ತಂಡದೊಂದಿಗೆ ಕೆಲಸ ಮಾಡಿದ್ದೇನೆ. ಈ ಕೆಲಸವು 2017 ರಿಂದ 2019 ರವರೆಗೆ ನಡೆದಿತ್ತು. ಈ ನಿಟ್ಟಿನಲ್ಲಿ, 2017 ರಲ್ಲಿ ಅರ್ನಾಬ್ ಗೋಸ್ವಾಮಿ ಅವರು ಲೋವರ್ ಪ್ಯಾರೆಲ್‌ನ ಸೇಂಟ್ ರೆಗಿಸ್ ಹೋಟೆಲ್‌ನಲ್ಲಿ ವೈಯಕ್ತಿಕವಾಗಿ ನನ್ನನ್ನು ಭೇಟಿಯಾದರು. ಫ್ರಾನ್ಸ್ ಮತ್ತು ಸ್ವಿಟ್ಜರ್ಲೆಂಡ್‌ಗೆ ನನ್ನ ಕುಟುಂಬದ ಪ್ರವಾಸಕ್ಕಾಗಿ 6000 ಡಾಲರ್ ಹಣವನ್ನು ನೀಡಿದರು…

ನಂತರ, 2019 ರಲ್ಲಿ ಅರ್ನಾಬ್ ಗೋಸ್ವಾಮಿ ಅವರು ನನ್ನನ್ನು ಮತ್ತೆ ಅದೇ ಹೋಟೆಲ್‌ನಲ್ಲಿ ಭೇಟಿಯಾಗಿ ಸ್ವೀಡನ್ ಮತ್ತು ಡೆನ್ಮಾರ್ಕ್‌ಗೆ ನನ್ನ ಕುಟುಂಬ ಪ್ರವಾಸಕ್ಕಾಗಿ ನನಗೆ 6000 ಡಾಲರ್‌ಗಳನ್ನು ನೀಡಿದರು. ಅಲ್ಲದೆ 2017 ರಲ್ಲಿ ಗೋಸ್ವಾಮಿ ನನ್ನನ್ನು ವೈಯಕ್ತಿಕವಾಗಿ ಐಟಿಸಿ ಪ್ಯಾರೆಲ್ ಹೋಟೆಲ್‌ನಲ್ಲಿ ಭೇಟಿಯಾಗಿ 20 ಲಕ್ಷ ರೂ. ನಗದು ನೀಡಿದ್ದರು… 2018 ಮತ್ತು 2019 ರಲ್ಲಿಯೂ ಸಹ ಗೋಸ್ವಾಮಿ ನನ್ನನ್ನು ಐಟಿಸಿ ಹೋಟೆಲ್ ಪ್ಯಾರೆಲ್‌ನಲ್ಲಿ ಭೇಟಿಯಾಗಿ ಎರಡು ಬಾರಿಯು 10 ಲಕ್ಷ ರೂಗಳನ್ನು ನೀಡಿದರು” ಎಂದು ದಾಸ್‌ಗುಪ್ತಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

“ಈ ಹೇಳಿಕೆಯನ್ನು ನಾವು ಸಂಪೂರ್ಣವಾಗಿ ನಿರಾಕರಿಸುತ್ತೇವೆ. ಏಕೆಂದರೆ ಈ ಹೇಳಿಕೆಯನ್ನು ಪುರಾವೆ ಇಲ್ಲದೆ ದಾಖಲಿಸಲಾಗಿದೆ. ಇದು ನ್ಯಾಯಾಲಯದಲ್ಲಿ ಪರಿಗಣಗೆ ಬರುವಂತದ್ದಲ್ಲ” ಎಂದು ದಾಸ್‌ಗುಪ್ತಾ ಅವರ ವಕೀಲ ಅರ್ಜುನ್ ಸಿಂಗ್ ಹೇಳಿದ್ದಾರೆ. ಅರ್ನಾಬ್ ಕೂಡಾ ಆರೋಪವನ್ನು ವಿರೋಧಿಸಿದ್ದು, ಅವರನ್ನು ಗುರಿಯಾಗಿಸಿಕೊಂಡು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿದ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...