Homeಅಂತರಾಷ್ಟ್ರೀಯಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

2019 ಸೆಪ್ಟಂಬರ್ 6 ರಂದು "ಪೂಚ್ ತಾ ಹೈ ಭಾರತ್" ಎನ್ನುವ ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಮತ್ತು ಅಂದಿನ ಚರ್ಚೆಯ ಪ್ಯಾನೆಲ್‌ನಲ್ಲಿದ್ದವರು ಆಕ್ಷೇಪಾರ್ಹ ಚರ್ಚೆಯನ್ನು ನಡೆಸಿದ್ದರು.

- Advertisement -
- Advertisement -

ರಿಪಬ್ಲಿಕ್ ಟಿವಿಯು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಮತ್ತು ದ್ವೇಷ ಹರಡುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದೆ ಎಂದು ಬ್ರಿಟನ್‌ನ ಸಂವಹನ ನಿಯಂತ್ರಣ ಕಚೇರಿಯು ಅರ್ನಾಬ್‌ ಗೋಸ್ವಾಮಿಗೆ 20,000 ಪೌಂಡ್‌ ದಂಡ ವಿಧಿಸಿದೆ.

ಆಕ್ರಮಣಕಾರಿ, ಆಕ್ಷೇಪಾರ್ಹ, ಒಂದು ಗುಂಪು ಅಥವಾ ಸಮುದಾಯದ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡಿದ ಪ್ರಕರಣದಡಿ ಈ ದಂಡವನ್ನು ವಿಧಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇದನ್ನೂ ಓದಿ: ಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!

2019 ಸೆಪ್ಟಂಬರ್ 6 ರಂದು “ಪೂಚ್ ತಾ ಹೈ ಭಾರತ್” ಎನ್ನುವ ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಮತ್ತು ಅಂದಿನ ಚರ್ಚೆಯ ಪ್ಯಾನೆಲ್‌ನಲ್ಲಿದ್ದವರು ಆಕ್ಷೇಪಾರ್ಹ ಚರ್ಚೆಯನ್ನು ನಡೆಸಿದ್ದಾರೆ ಎಂದು ವರದಿಯು ತಿಳಿಸಿದೆ.

ಚಂದ್ರಯಾನ-2ರ ಕುರಿತು ಕಾರ್ಯಕ್ರಮ ನಡೆಸುವ ವೇಳೆ ಪಾಕಿಸ್ತಾನ ಕುರಿತಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆಂದು ದಂಡ ವಿಧಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅರ್ನಾಬ್‌ ಗೋಸ್ವಾಮಿ, “ಅವರ ವಿಜ್ಞಾನಿಗಳು, ಅವರ ಡಾಕ್ಟರ್‌ಗಳು, ಅವರ ನಾಯಕರು, ಅವರ ರಾಜಕೀಯ ಮುಖಂಡರು ಎಲ್ಲರೂ ಭಯೋತ್ಪಾದಕರು. ಅವರ ಕ್ರೀಡಾಪಟುಗಳು ಕೂಡಾ ಭಯೋತ್ಪಾದಕರು. ಪಾಕಿಸ್ತಾನದಲ್ಲಿರುವ ಪ್ರತಿಯೊಂದು ಮಕ್ಕಳು ಕೂಡಾ ಭಯೋತ್ಪಾದಕರು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಅಲ್ಲದೇ ಪ್ಯಾನೆಲ್‌ನಲ್ಲಿದ್ದ ಇತರರು ಕೂಡಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಕಾರಣದಿಂದಾಗಿ ರಿಪಬ್ಲಿಕ್ ಟಿವಿ ಮುಖ್ಯಸ್ಥರ ವಿರುದ್ಧ ಬ್ರಿಟನ್‌ನ ಸಂವಹನ ನಿಯಂತ್ರಣ ಕಚೇರಿಯು 20,000 ಪೌಂಡ್ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ. ಇದು ಭಾರತದ ಕರೆನ್ಸಿಯಲ್ಲಿ ಸುಮಾರು 19 ಲಕ್ಷವಾಗುತ್ತದೆ.

ಭಾರತದಲ್ಲಿಯೂ ಸಹ ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಗೋಸ್ವಾಮಿಯ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೊಂದರಲ್ಲಿ ಇತ್ತೀಚೆಗೆ ಬಂಧನಕ್ಕೂ ಒಳಗಾಗಿದ್ದರು.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...