Homeಮುಖಪುಟರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

"ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ, 'ಬಂಧಿಸಿ' ಎಂದು ಅರ್ನಾಬ್ ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ? ಎಂದು ನಾಯಕ್ ಪತ್ನಿ ವಿಷಾದಿಸಿದರು.

- Advertisement -
- Advertisement -

2018 ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬಂಧಿಸಲಾಗಿದ್ದು, “ಇವರನ್ನು ಬಂಧಿಸಿರುವುದಕ್ಕೆ ಸಂತೋಷವಾಗಿದೆ” ಎಂದು ಅನ್ವಯ್ ನಾಯಕ್ ಅವರ ಕುಟುಂಬ ಹೇಳಿದೆ.

“ಅರ್ನಾಬ್ ಗೋಸ್ವಾಮಿ ಬಂಧನದಿಂದ ನಮಗೆ ಸಂತೋಷವಾಗಿದೆ. ಈ ಹಿಂದೆ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಂದ ನಮಗೆ ಸಾಕಷ್ಟು ಒತ್ತಡವಿತ್ತು. ಹಣವನ್ನು ಹಿಂದಿರುಗಿಸುವಂತೆ ನನ್ನ ಪತಿ ಅರ್ನಾಬ್‌ಗೆ ಹಲವುಬಾರಿ ಒತ್ತಾಯಿಸಿದ್ದು, ಇದು ಅವರಿಗೆ ಸಾವು-ಬದುಕಿನ ವಿಷಯವಾಗಿದೆ ಎಂದು ಕೇಳಿಕೊಂಡಿದ್ದರು” ಎಂದು ಅದ್ನ್ಯಾ ಹೇಳಿದರು.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ರಿಪಬ್ಲಿಕ್ ಟಿವಿಯಿಂದ ಬಾಕಿ ಹಣ ಪಾವತಿ ಮಾಡದೇ ಇರುವುದೇ ನನ್ನ ತಂದೆ ಮತ್ತು ಅಜ್ಜಿಯ ಸಾವಿಗೆ ಕಾರಣವಾಗಿದೆ ಎಂದು ನಾಯಕ್ ಅವರ ಮಗಳು ಅದ್ನ್ಯಾ ಹೇಳಿದ್ದು, “ನಾವು ಈ ವಿಷಯವನ್ನು ರಾಜಕೀಯವಾಗಿಸಲು ಬಯಸುವುದಿಲ್ಲ. ಈ ಸಮಸ್ಯೆಯಿಂದಾಗಿ ನಾನು ಇಬ್ಬರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ. ಈ ಬಂಧನವನ್ನು ಬಹಳ ಹಿಂದೆಯೇ ಮಾಡಬೇಕಾಗಿತ್ತು” ಎಂದು ಅದ್ನ್ಯಾ ಹೇಳಿದರು.

ಈ ಪ್ರಕರಣವನ್ನು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧೀಕರಿಸಿದ್ದರೂ, “ಗೋಸ್ವಾಮಿ ಮತ್ತು ಇತರ ಇಬ್ಬರು ಹೆಸರನ್ನು ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದರೂ ಇದುವರೆಗೂ ಯಾವುದೇ ಬಂಧನವಾಗಿಲ್ಲ” ಎಂದು ನಾಯಕ್ ಪತ್ನಿ ಹೇಳಿದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

“ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ ಅರ್ನಾಬ್, ‘ಬಂಧಿಸಿ ಬಂಧಿಸಿ’ ಎಂದು ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ?” ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ವಯ್ ನಾಯಕ್ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....