Homeಮುಖಪುಟರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

"ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ, 'ಬಂಧಿಸಿ' ಎಂದು ಅರ್ನಾಬ್ ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ? ಎಂದು ನಾಯಕ್ ಪತ್ನಿ ವಿಷಾದಿಸಿದರು.

- Advertisement -
- Advertisement -

2018 ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬಂಧಿಸಲಾಗಿದ್ದು, “ಇವರನ್ನು ಬಂಧಿಸಿರುವುದಕ್ಕೆ ಸಂತೋಷವಾಗಿದೆ” ಎಂದು ಅನ್ವಯ್ ನಾಯಕ್ ಅವರ ಕುಟುಂಬ ಹೇಳಿದೆ.

“ಅರ್ನಾಬ್ ಗೋಸ್ವಾಮಿ ಬಂಧನದಿಂದ ನಮಗೆ ಸಂತೋಷವಾಗಿದೆ. ಈ ಹಿಂದೆ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಂದ ನಮಗೆ ಸಾಕಷ್ಟು ಒತ್ತಡವಿತ್ತು. ಹಣವನ್ನು ಹಿಂದಿರುಗಿಸುವಂತೆ ನನ್ನ ಪತಿ ಅರ್ನಾಬ್‌ಗೆ ಹಲವುಬಾರಿ ಒತ್ತಾಯಿಸಿದ್ದು, ಇದು ಅವರಿಗೆ ಸಾವು-ಬದುಕಿನ ವಿಷಯವಾಗಿದೆ ಎಂದು ಕೇಳಿಕೊಂಡಿದ್ದರು” ಎಂದು ಅದ್ನ್ಯಾ ಹೇಳಿದರು.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ರಿಪಬ್ಲಿಕ್ ಟಿವಿಯಿಂದ ಬಾಕಿ ಹಣ ಪಾವತಿ ಮಾಡದೇ ಇರುವುದೇ ನನ್ನ ತಂದೆ ಮತ್ತು ಅಜ್ಜಿಯ ಸಾವಿಗೆ ಕಾರಣವಾಗಿದೆ ಎಂದು ನಾಯಕ್ ಅವರ ಮಗಳು ಅದ್ನ್ಯಾ ಹೇಳಿದ್ದು, “ನಾವು ಈ ವಿಷಯವನ್ನು ರಾಜಕೀಯವಾಗಿಸಲು ಬಯಸುವುದಿಲ್ಲ. ಈ ಸಮಸ್ಯೆಯಿಂದಾಗಿ ನಾನು ಇಬ್ಬರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ. ಈ ಬಂಧನವನ್ನು ಬಹಳ ಹಿಂದೆಯೇ ಮಾಡಬೇಕಾಗಿತ್ತು” ಎಂದು ಅದ್ನ್ಯಾ ಹೇಳಿದರು.

ಈ ಪ್ರಕರಣವನ್ನು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧೀಕರಿಸಿದ್ದರೂ, “ಗೋಸ್ವಾಮಿ ಮತ್ತು ಇತರ ಇಬ್ಬರು ಹೆಸರನ್ನು ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದರೂ ಇದುವರೆಗೂ ಯಾವುದೇ ಬಂಧನವಾಗಿಲ್ಲ” ಎಂದು ನಾಯಕ್ ಪತ್ನಿ ಹೇಳಿದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

“ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ ಅರ್ನಾಬ್, ‘ಬಂಧಿಸಿ ಬಂಧಿಸಿ’ ಎಂದು ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ?” ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ವಯ್ ನಾಯಕ್ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...