Homeಮುಖಪುಟಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

"ಗೂಂಡಾ ಕಾಯ್ದೆಯ ಅಡಿಯಲ್ಲಿ ಕೇರಳ ಮೂಲದ ಪತ್ರಕರ್ತನನ್ನು ಬಂಧಿಸಿದಾಗ ಅಮಿತ್ ಶಾ ಮಾತನಾಡಿದ್ದರೇ? ಅರ್ನಾಬ್ ಅರೆಸ್ಟ್‌ ಆಗಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ. ತನ್ನ ಪತ್ರಿಕೋದ್ಯಮದ ಕಾರ್ಯಕ್ಕಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ಅರ್ನಾಬ್‌ ಗೋಸ್ವಾಮಿಯನ್ನು ಬಂಧಿಸಿರುವುದು ಖಂಡನೀಯ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಸರಿ ಎಂದು ವಾದಿಸುತ್ತಿದ್ದಾರೆ.

ಅರ್ನಾಬ್ ಬಂಧನ ಕುರಿತಂತೆ ಟ್ವಿಟ್ಟರ್‌ನಲ್ಲಿ ವಾದ-ವಾಗ್ವಾದಗಳು ನಡೆಯುತ್ತಿದ್ದು, ಸಾವಿರಾರು ಜನ ಅರ್ನಾಬ್ ಹೆಸರಿನ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ಭಾರತದ ಎಡಿಟರ್ಸ್‌ ಗಿಲ್ಡ್ ಅರ್ನಾಬ್ ಪರ‌ ಟ್ವೀಟ್ ಮಾಡಿ, “ರಿಪಬ್ಲಿಕ್ ಟಿವಿ ಸಂಪಾದಕರನ್ನು ನಿರೀಕ್ಷಿತವಲ್ಲದ ರೀತಿಯಲ್ಲಿ ಬಂಧಿಸಿರುವುದು ಖಂಡನೀಯ. ಮಹಾರಾಷ್ಟ್ರ ಮುಖ್ಯಮಂತ್ರಿ ಸಂಪಾದಕರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಈ ಮೂಲಕ ಒತ್ತಾಯಿಸುತ್ತೇವೆ. ರಾಜ್ಯವು ತನ್ನ ಅಧಿಕಾರವನ್ನು ತನ್ನನ್ನು ವಿಮರ್ಶಿಸುವವರ ವಿರುದ್ಧ ಉಪಯೋಗಿಸಿಕೊಳ್ಳಬಾರದು” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಟ್ವೀಟ್ ಮಾಡಿ, “ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷ ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ಅವಮಾನಿಸಿದ್ದಾರೆ. ರಾಜ್ಯ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಮೇಲೆ ದಾಳಿ ಮಾಡಿದ್ದು, ಇದು ವೈಯಕ್ತಿಕ ಸ್ವಾತಂತ್ರ ಮತ್ತು ಪ್ರಜಾಪ್ರಭುತ್ವದ 4ನೆ ಸ್ತಂಭದ ಮೇಲಿನ ದಾಳಿಯಾಗಿದೆ. ಇದು ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮದ ಮೇಲಿನ ದಾಳಿಯಾಗಿದ್ದು, ಖಂಡನೀಯವಾಗಿದೆ” ಎಂದು ಅರ್ನಾಬ್ ಪರ ಬರೆದುಕೊಂಡಿದ್ದಾರೆ.

ಹೀಗೆ ನೂರಾರು ಜನ ಬಿಜೆಪಿ ನಾಯಕರೂ ಸೇರಿದಂತೆ ಸಾರ್ವಜನಿಕರೂ ಕೂಡ ಅರ್ನಾಬ್ ಬಂಧನವನ್ನು ಖಂಡಿಸಿ ಅವರ ಪರ ಟ್ವೀಟ್ ಮಾಡಿದ್ದು, #IndiaWithArnab ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

ಆದರೆ ಇದರ ಜೊತೆಯಲ್ಲೇ ಮತ್ತಷ್ಟು ಟ್ವಿಟ್ಟರ್ ಬಳಕೆದಾರರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತೀಯ ಕಾಂಗ್ರೆಸ್‌ನ ವಕ್ತಾರರಾದ ಶಾಮಾ ಮೊಹಮ್ಮದ್ ಅಮಿತ್ ಶಾ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದು, “ಹತ್ರಾಸ್ ಘಟನೆಯನ್ನು ವರದಿ ಮಾಡಲು ಹೋಗಿದ್ದಕ್ಕೆ ಕರಾಳ ಗೂಂಡಾ ಕಾಯ್ದೆಯ ಅಡಿಯಲ್ಲಿ ಕೇರಳ ಮೂಲದ ಪತ್ರಕರ್ತನನ್ನು ಬಂಧಿಸಿದಾಗ ಅಮಿತ್ ಶಾ ಮಾತನಾಡಿದ್ದರೇ? ಅರ್ನಾಬ್ ಅರೆಸ್ಟ್‌ ಆಗಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿಯೇ ಹೊರತು ತನ್ನ ಪತ್ರಿಕೋದ್ಯಮದ ಕಾರ್ಯಕ್ಕಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಆಮ್ ಆದ್ಮಿಯ ಕಾರ್ಯಕರ್ತರಾದ ಆರತಿ ಎಂಬುವವರು ಅತ್ಮಹತ್ಯೆ ಮಾಡಿಕೊಂಡಿದ್ದ ಅನ್ವಯ್‌ ನಾಯಕ್ ಪತ್ನಿ ಮಾತನಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದು, “ಅನ್ವಯ್ ನಾಯಕ್ ತನ್ನ ಆತ್ಮಹತ್ಯಾ ಹೇಳಿಕೆಯಲ್ಲಿ ಅರ್ನಾಬ್ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಮಾಡಿ ತನ್ನ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಅವರ ಪತ್ನಿ ನ್ಯಾಯ ಕೇಳುತ್ತಿದ್ದಾರೆ. #justiceForAnvayNaik” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಹೀಗೆ ನೂರಾರು ಜನರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಮೇ 2018 ರಲ್ಲಿ ಅಲಿಬಾಗ್‌ನ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಅರ್ನಾಬ್ ಗೋಸ್ವಾಮಿ ಸೇರಿದಂತೆ ಇನ್ನಿಬ್ಬರು ಅನ್ವಯ್ ನಾಯಕ್‌ಗೆ ಸೇರಬೇಕಿದ್ದ 5.40 ಕೋಟಿ ರೂಪಾಯಿಗಳನ್ನು ಪಾವತಿಸದೆ ಇರುವುದರಿಂದ ಅವರು ಆರ್ಥಿಕ ತೊಂದರೆಗೆ ಈಡಾಗಿದ್ದರು ಎಂದು ಅನ್ವಯ್ ನಾಯಕ್ ತಮ್ಮ ಸೂಸೈಡ್ ನೋಟ್‌‌ನಲ್ಲಿ ಬರೆದಿದ್ದರು.

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕಾನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.


ಇದನ್ನೂ ಓದಿ: ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...