Homeಮುಖಪುಟಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

"ಗೂಂಡಾ ಕಾಯ್ದೆಯ ಅಡಿಯಲ್ಲಿ ಕೇರಳ ಮೂಲದ ಪತ್ರಕರ್ತನನ್ನು ಬಂಧಿಸಿದಾಗ ಅಮಿತ್ ಶಾ ಮಾತನಾಡಿದ್ದರೇ? ಅರ್ನಾಬ್ ಅರೆಸ್ಟ್‌ ಆಗಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ. ತನ್ನ ಪತ್ರಿಕೋದ್ಯಮದ ಕಾರ್ಯಕ್ಕಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ಅರ್ನಾಬ್‌ ಗೋಸ್ವಾಮಿಯನ್ನು ಬಂಧಿಸಿರುವುದು ಖಂಡನೀಯ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಸರಿ ಎಂದು ವಾದಿಸುತ್ತಿದ್ದಾರೆ.

ಅರ್ನಾಬ್ ಬಂಧನ ಕುರಿತಂತೆ ಟ್ವಿಟ್ಟರ್‌ನಲ್ಲಿ ವಾದ-ವಾಗ್ವಾದಗಳು ನಡೆಯುತ್ತಿದ್ದು, ಸಾವಿರಾರು ಜನ ಅರ್ನಾಬ್ ಹೆಸರಿನ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ಭಾರತದ ಎಡಿಟರ್ಸ್‌ ಗಿಲ್ಡ್ ಅರ್ನಾಬ್ ಪರ‌ ಟ್ವೀಟ್ ಮಾಡಿ, “ರಿಪಬ್ಲಿಕ್ ಟಿವಿ ಸಂಪಾದಕರನ್ನು ನಿರೀಕ್ಷಿತವಲ್ಲದ ರೀತಿಯಲ್ಲಿ ಬಂಧಿಸಿರುವುದು ಖಂಡನೀಯ. ಮಹಾರಾಷ್ಟ್ರ ಮುಖ್ಯಮಂತ್ರಿ ಸಂಪಾದಕರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಈ ಮೂಲಕ ಒತ್ತಾಯಿಸುತ್ತೇವೆ. ರಾಜ್ಯವು ತನ್ನ ಅಧಿಕಾರವನ್ನು ತನ್ನನ್ನು ವಿಮರ್ಶಿಸುವವರ ವಿರುದ್ಧ ಉಪಯೋಗಿಸಿಕೊಳ್ಳಬಾರದು” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಟ್ವೀಟ್ ಮಾಡಿ, “ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷ ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ಅವಮಾನಿಸಿದ್ದಾರೆ. ರಾಜ್ಯ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಮೇಲೆ ದಾಳಿ ಮಾಡಿದ್ದು, ಇದು ವೈಯಕ್ತಿಕ ಸ್ವಾತಂತ್ರ ಮತ್ತು ಪ್ರಜಾಪ್ರಭುತ್ವದ 4ನೆ ಸ್ತಂಭದ ಮೇಲಿನ ದಾಳಿಯಾಗಿದೆ. ಇದು ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮದ ಮೇಲಿನ ದಾಳಿಯಾಗಿದ್ದು, ಖಂಡನೀಯವಾಗಿದೆ” ಎಂದು ಅರ್ನಾಬ್ ಪರ ಬರೆದುಕೊಂಡಿದ್ದಾರೆ.

ಹೀಗೆ ನೂರಾರು ಜನ ಬಿಜೆಪಿ ನಾಯಕರೂ ಸೇರಿದಂತೆ ಸಾರ್ವಜನಿಕರೂ ಕೂಡ ಅರ್ನಾಬ್ ಬಂಧನವನ್ನು ಖಂಡಿಸಿ ಅವರ ಪರ ಟ್ವೀಟ್ ಮಾಡಿದ್ದು, #IndiaWithArnab ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

ಆದರೆ ಇದರ ಜೊತೆಯಲ್ಲೇ ಮತ್ತಷ್ಟು ಟ್ವಿಟ್ಟರ್ ಬಳಕೆದಾರರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತೀಯ ಕಾಂಗ್ರೆಸ್‌ನ ವಕ್ತಾರರಾದ ಶಾಮಾ ಮೊಹಮ್ಮದ್ ಅಮಿತ್ ಶಾ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದು, “ಹತ್ರಾಸ್ ಘಟನೆಯನ್ನು ವರದಿ ಮಾಡಲು ಹೋಗಿದ್ದಕ್ಕೆ ಕರಾಳ ಗೂಂಡಾ ಕಾಯ್ದೆಯ ಅಡಿಯಲ್ಲಿ ಕೇರಳ ಮೂಲದ ಪತ್ರಕರ್ತನನ್ನು ಬಂಧಿಸಿದಾಗ ಅಮಿತ್ ಶಾ ಮಾತನಾಡಿದ್ದರೇ? ಅರ್ನಾಬ್ ಅರೆಸ್ಟ್‌ ಆಗಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿಯೇ ಹೊರತು ತನ್ನ ಪತ್ರಿಕೋದ್ಯಮದ ಕಾರ್ಯಕ್ಕಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಆಮ್ ಆದ್ಮಿಯ ಕಾರ್ಯಕರ್ತರಾದ ಆರತಿ ಎಂಬುವವರು ಅತ್ಮಹತ್ಯೆ ಮಾಡಿಕೊಂಡಿದ್ದ ಅನ್ವಯ್‌ ನಾಯಕ್ ಪತ್ನಿ ಮಾತನಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದು, “ಅನ್ವಯ್ ನಾಯಕ್ ತನ್ನ ಆತ್ಮಹತ್ಯಾ ಹೇಳಿಕೆಯಲ್ಲಿ ಅರ್ನಾಬ್ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಮಾಡಿ ತನ್ನ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಅವರ ಪತ್ನಿ ನ್ಯಾಯ ಕೇಳುತ್ತಿದ್ದಾರೆ. #justiceForAnvayNaik” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಹೀಗೆ ನೂರಾರು ಜನರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಮೇ 2018 ರಲ್ಲಿ ಅಲಿಬಾಗ್‌ನ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಅರ್ನಾಬ್ ಗೋಸ್ವಾಮಿ ಸೇರಿದಂತೆ ಇನ್ನಿಬ್ಬರು ಅನ್ವಯ್ ನಾಯಕ್‌ಗೆ ಸೇರಬೇಕಿದ್ದ 5.40 ಕೋಟಿ ರೂಪಾಯಿಗಳನ್ನು ಪಾವತಿಸದೆ ಇರುವುದರಿಂದ ಅವರು ಆರ್ಥಿಕ ತೊಂದರೆಗೆ ಈಡಾಗಿದ್ದರು ಎಂದು ಅನ್ವಯ್ ನಾಯಕ್ ತಮ್ಮ ಸೂಸೈಡ್ ನೋಟ್‌‌ನಲ್ಲಿ ಬರೆದಿದ್ದರು.

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕಾನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.


ಇದನ್ನೂ ಓದಿ: ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...