Homeಮುಖಪುಟಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯ ವಾಟ್ಸಾಪ್ ಚಾಟ್‌‌ಗಳ ಬಗ್ಗೆ ಶಿವಸೇನೆ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ವಾಟ್ಸಪ್‌‌ ಚಾಟ್‌ಗಳಲ್ಲಿ ದೇಶದ ಆಂತರಿಕ ಭದ್ರತೆಯ ಉಲ್ಲಂಘನೆಯಾಗಿದೆ ಮತ್ತು ಅರ್ನಾಬ್‌ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅದು ಒತ್ತಾಯಿಸಿದೆ.

ಫೆಬ್ರವರಿ 26, 2019 ರಂದು ಬಾಲಕೋಟ್‌‌ನ ಭಯೋತ್ಪಾದಕ ಶಿಬಿರದ ಮೇಲೆ ಭಾರತೀಯ ಏರ್‌ ಫೋರ್ಸ್ ಬಾಂಬ್ ಸ್ಫೋಟಿಸಿದೆ ಎನ್ನಲಾದ ಈ ಯೋಜನೆಯು ಗೌಪ್ಯವಾಗಿತ್ತು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅರ್ನಾಬ್‌‌‌‌‌ ಮತ್ತು ಆಗಿನ ಬಾರ್ಕ್‌‌ನ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ನಡುವೆ ನಡೆದಿರುವ ವಾಟ್ಸಾಪ್ ಸಂಭಾಷಣೆಯಲ್ಲಿ, ಭಾರತೀಯ ವಾಯುಸೇನೆ ನಡೆಸಲಿರುವ ಬಾಲಕೋಟ್ ವಾಯುದಾಳಿಯ ಬಗ್ಗೆ ದಾಳಿಗಿಂತಲೂ ಮೂರು ದಿನ ಮೊದಲೇ ಚರ್ಚಿಸಿದ್ದರು. ಇದು ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ.

ಇದನ್ನೂ ಓದಿ: ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ ಇಲ್ಲಿದೆ

ಈ ಚಾಟ್‌ಗಳು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನು ಒಡ್ಡಿದೆ ಎಂದಿರುವ ಶಿವಸೇನೆಯ ನಾಯಕ ಸಂಜಯ್ ರಾವತ್‌, “ಇದು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ನಾನು ಭಾವಿಸುತ್ತೇನೆ. ಕೆಲವೊಮ್ಮೆ, ಇಂತಹ ಮಿಲಿಟರಿ ರಹಸ್ಯಗಳು ಉನ್ನತ ಅಧಿಕಾರಿಗಳಿಗೆ ತಿಳಿದಿರುವುದಿಲ್ಲ. ಒಂದು ವೇಳೆ ಸೈನಿಕರು ಇಂತಹ ಯಾವುದೇ ರಹಸ್ಯಗಳನ್ನು ಅಥವಾ ದಾಖಲೆಗಳನ್ನು ಹೊಂದಿರುವುದು ಕಂಡುಬಂದರೆ, ಅವರನ್ನು ವಿಚಾರಣೆ ನಡೆಸಲಾಗುತ್ತದೆ ಎಂದಿದ್ದಾರೆ.

ಆದರೆ ಈ ಘಟನೆಯಲ್ಲಿ, ಬಾಲಕೋಟ್‌ನಲ್ಲಿ ವಾಯುದಾಳಿ ಸಂಭವಿಸುತ್ತದೆ ಎಂದು ಅರ್ನಾಬ್‌‌ಗೆ ತಿಳಿದಿತ್ತು. ಇದರರ್ಥ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯಾಗಿದೆ. ದೇಶದ ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳುತ್ತಾರೆ? ಇದು ರಕ್ಷಣೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅವರನ್ನು ಕೋರ್ಟ್ ಮಾರ್ಷಲ್ ಮಾಡುತ್ತೀರಾ?’’ ಎಂದು ಪ್ರಶ್ನಿಸಿದ್ದಾರೆ.

ಶಿವಸೇನೆ ಸೋಮವಾರ ತನ್ನ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. “ರಾಷ್ಟ್ರೀಯ ರಹಸ್ಯಗಳನ್ನು ಹಂಚಿಕೊಳ್ಳುವುದು ರಾಷ್ಟ್ರ ವಿರೋಧಿ ಅಲ್ಲ ಎಂದು ಬಿಜೆಪಿಯ ಜನರು ಭಾವಿಸಿದರೆ, ರಾಷ್ಟ್ರೀಯತೆಯ ಬಗ್ಗೆಗಿನ ಅವರ ವ್ಯಾಖ್ಯಾನವನ್ನು ಪರೀಕ್ಷಿಸುವುದು ಅಗತ್ಯವಾಗಿದೆ” ಎಂದು ಬರೆದಿದ್ದಾರೆ.

ಸಾಮ್ನಾ ಸಂಪಾದಕೀಯವು ಟಿಆರ್‌ಪಿ ಹಗರಣವನ್ನು ಭೇದಿಸಿದ ಮುಂಬೈ ಪೊಲೀಸರನ್ನು ಶ್ಲಾಘಿಸಿದ್ದು, ಅವರಿಗೆ “ಜೀವಮಾನದ ಸಾಧನೆ ಪ್ರಶಸ್ತಿ” ನೀಡಬೇಕು ಎಂದು ಹೇಳಿದೆ.


ಇದನ್ನೂ ಓದಿ: ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...