Homeಮುಖಪುಟಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

- Advertisement -
- Advertisement -

ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಮಂಗಳವಾರ (ಆ.5) ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ಲೋಕಸಭೆಯ ಮುಂದಿಟ್ಟ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. ನಂತರ 13 ಹಾಸನದಲ್ಲಿ ಮತ್ತು 12 ಬೆಳಗಾವಿಯಲ್ಲಿವೆ.

ಅಮಿತ್ ಶಾ ಅವರ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 6,291 ಕೃಷಿ ಸಹಕಾರ ಸಂಘಗಳಿವೆ. ಅವುಗಳಲ್ಲಿ 64 ಪ್ರಸ್ತುತ ಕಾರ್ಯನಿರ್ವಹಿಸುತ್ತಿಲ್ಲ. 125 ಸಂಘಗಳು ದಿವಾಳಿ ಹಂತದಲ್ಲಿವೆ.

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ 428 ಹೊಸ ಕೃಷಿ ಸಹಕಾರ ಸಂಘಗಳು ನೋಂದಾಯಿಸಲ್ಪಟ್ಟಿದ್ದು, ಬೆಳಗಾವಿಯಲ್ಲಿ ಅತಿ ಹೆಚ್ಚು 187 ನೋಂದಾಯಿಸಲಾಗಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ. 2024-25ರ ಆರ್ಥಿಕ ವರ್ಷದಲ್ಲಿ ದೇಶದಾದ್ಯಂತ 4,964 ಹೊಸ ಕೃಷಿ ಸಹಕಾರ ಸಂಘಗಳು ನೋಂದಾಯಿಸಲ್ಪಟ್ಟಿವೆ ಎಂದಿದ್ದಾರೆ.

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್‌ಸಿಡಿಸಿ) 2024-25ರವರೆಗಿನ ಐದು ವರ್ಷಗಳಲ್ಲಿ ಕರ್ನಾಟಕದ ಕೃಷಿ ಸಹಕಾರ ಸಂಘಗಳಿಗೆ ರೂ. 25.56 ಕೋಟಿ ವಿತರಿಸಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಬೀದರ್‌ನ ಏಕಾಂಬಾದಲ್ಲಿರುವ ಪ್ರಾಥಮಿಕ ಕೃಷಿ ಸಹಕಾರಿ ಒಕ್ಕೂಟದಲ್ಲಿ ಧಾನ್ಯ ಸಂಗ್ರಹಣಾ ಘಟಕವನ್ನು ನಿರ್ಮಿಸುವ ಪ್ರಾಯೋಗಿಕ ಯೋಜನೆಯಡಿಯಲ್ಲಿ ಸಂಸ್ಕರಣಾ ಘಟಕದೊಂದಿಗೆ 1,000 ಟನ್‌ಗಳ ಗೋದಾಮನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕಾಗಿ, ಕರ್ನಾಟಕದಲ್ಲಿ 5,491 ಸಂಘಗಳಿಗೆ ಹಾರ್ಡ್‌ವೇರ್ ತಲುಪಿಸಲಾಗಿದೆ. 3,765 ಸಹಕಾರಿ ಸಂಸ್ಥೆಗಳನ್ನು ಉದ್ಯಮ ಸಂಪನ್ಮೂಲ ಯೋಜನೆಗೆ (ಇಆರ್‌ಪಿ) ವ್ಯವಸ್ಥೆಗೆ ಸೇರಿಸಲಾಗಿದೆ, 1,930 ಸಹಕಾರಿ ಸಂಸ್ಥೆಗಳು ಇಆರ್‌ಪಿಯಲ್ಲಿ ಸಕ್ರಿಯವಾಗಿವೆ ಮತ್ತು 1,728 ಸಹಕಾರಿ ಸಂಸ್ಥೆಗಳು ಕೊನೆಯ ಹಂತದ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಿವೆ ಎಂದು ಸಚಿವರು ವಿವರಿಸಿದ್ದಾರೆ.

ಗಣಕೀಕರಣ ಯೋಜನೆಯಡಿ ಕೇಂದ್ರವು ಕರ್ನಾಟಕಕ್ಕೆ 55.64 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ; ಇನ್ನೂ ಆರು ತಿಂಗಳು ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...