Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...