Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...