Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...