Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...