Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...