Homeಮುಖಪುಟಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

ಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

- Advertisement -
- Advertisement -

ಈ ವರ್ಷ ಸುಮಾರು 4,300 ಲಕ್ಷಾಧಿಪತಿಗಳು ಭಾರತದಿಂದ ವಲಸೆ ಹೋಗುವ ನಿರೀಕ್ಷೆಯಿದೆ. ಅವರಲ್ಲಿ ಹೆಚ್ಚಿನವರು ಯುಎಇಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಹೂಡಿಕೆ ವಲಸೆ ಸಲಹಾ ಸಂಸ್ಥೆಯಾದ ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ಇತ್ತೀಚಿನ ವರದಿ ಹೇಳಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದ್ದರೂ, ಚೀನಾ ಮತ್ತು ಯುಕೆ ನಂತರ ಲಕ್ಷಾಧಿಪತಿಗಳ ವಲಸೆಯ ವಿಷಯದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಚೀನಾ ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿರುವ ಭಾರತ ಲಕ್ಷಾದಿಪತಿಗಳ ವಲಸೆಯ ವಿಷಯದಲ್ಲಿ ಚೀನಾಕ್ಕಿಂತ ಶೇಕಡಾ 30 ಶೇ. ಹಿಂದೆಯಿದೆ.

ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ವರದಿಯು ಕಳೆದ ವರ್ಷ ಭಾರತದಿಂದ 5,100 ಲಕ್ಷಾದಿಪತಿಗಳು ವಿದೇಶಕ್ಕೆ ವಲಸೆ ಹೋಗಿರುವುದನ್ನು ಎತ್ತಿ ತೋರಿಸಿತ್ತು.

ಭಾರತವು ಪ್ರತಿ ವರ್ಷ ಸಾವಿರಾರು ಲಕ್ಷಾದಿಪತಿಗಳನ್ನು ಕಳೆದುಕೊಳ್ಳುತ್ತಿದೆ. ಅನೇಕರು ಯುಎಇಗೆ ವಲಸೆ ಹೋಗುತ್ತಿದ್ದಾರೆ. ಸಂಪತ್ತಿನ ಬೆಳವಣಿಗೆಯೊಂದಿಗೆ ಇದನ್ನು ತಗ್ಗಿಸಬಹುದು. ಹೊಸ ಲಕ್ಷಾದಿಪತಿಗಳನ್ನು ಸೃಷ್ಟಿಸುವುದಕ್ಕಿಂತ ಇರುವವರನ್ನು ಉಳಿಸಿಕೊಳ್ಳಬಹುದು ಎಂದು ವರದಿ ಹೇಳಿರುವುದಾಗಿ ಎನ್‌ಡಿವಿ ವರದಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ, ಭಾರತದ ಅಧಿಕ ನಿವ್ವಳ ಮೌಲ್ಯದ ವ್ಯಕ್ತಿಗಳ ನಿರಂತರ ವಲಸೆಯ ಹಿನ್ನೆಲೆ ಅನೇಕ ಭಾರತೀಯ ಖಾಸಗಿ ಬ್ಯಾಂಕ್‌ಗಳು ಯುಎಇಗೆ ವಿಸ್ತರಿಸುತ್ತಿವೆ. ಭಾರತೀಯ ಕುಟುಂಬಗಳಿಗೆ ಸಂಪತ್ತು ನಿರ್ವಹಣೆ ಸೇವೆಗಳನ್ನು ಒದಗಿಸುತ್ತಿರುವ ಕೆಲವು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು 360 ಒನ್ ವೆಲ್ತ್ ಒಳಗೊಂಡಿವೆ ಎಂದು ವರದಿ ವಿವರಿಸಿದೆ.

ಲಕ್ಷಾದಿಪತಿಗಳ ವಲಸೆಯು ಒಂದು ದೇಶದ ವಿದೇಶಿ ವಿನಿಮಯದ ಮೇಲೆ ಗಮನಾರ್ಹ ಪರಿಣಾಮ ಬೀರುವ ವಿದ್ಯಮಾನವಾಗಿದೆ. ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳು ಮತ್ತೊಂದು ದೇಶಕ್ಕೆ ವಲಸೆ ಹೋಗುವಾಗ ಅವರ ಆಸ್ತಿಯ ಗಣನೀಯ ಭಾಗವು ಅವರ ಜೊತೆ ಹೋಗುತ್ತದೆ.

ಲಕ್ಷಾದಿಪತಿಗಳು ತಾಯ್ನಾಡು ತೊರೆದು ವಲಸೆ ಹೋಗಲು ಮುಖ್ಯ ಕಾರಣಗಳಲ್ಲಿ ತೆರಿಗೆ ಪ್ರಯೋಜನಗಳು, ಸುರಕ್ಷತೆ, ಆರ್ಥಿಕ ಪರಿಗಣನೆ, ನಿವೃತ್ತಿ ನಿರೀಕ್ಷೆ, ವ್ಯಾಪಾರ ಅವಕಾಶಗಳು ಮತ್ತು ಉತ್ತಮ ಜೀವನಶೈಲಿ ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನೂ ಓದಿ : ಜಾತಿ ಸಮೀಕ್ಷೆಗೆ ಅನುಮೋದನೆ ನೀಡಿದ ಚಂಪೈ ಸೊರೇನ್ ನೇತೃತ್ವದ ಜಾರ್ಖಂಡ್ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...