Homeಮುಖಪುಟಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿತ್ತು ಎಂದಿರುವ ಅವರು, “ಬಿಜೆಪಿ ಆಡುತ್ತಿರುವ ಕೆಟ್ಟ ಆಟವು (dirty game) ತೆಲಂಗಾಣದಲ್ಲಿ ಈ ಬಾರಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತ್ತೀಚೆಗೆ ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣಗೊಂಡ ತೆಲಂಗಾಣ ರಾಷ್ಟ್ರ ಸಮಿತಿಗೆ ಸೇರಿದ ಕೆಲವು ಶಾಸಕರನ್ನು ಬಿಜೆಪಿಗೆ ಸೆಳೆಯುವುದಕ್ಕಾಗಿ ಲಂಚ ನೀಡಲು ಯತ್ನಿಸಲಾಗಿದೆ ಎಂಬ ಆರೋಪ ಬಂದಿದೆ. ಮೂವರು ವ್ಯಕ್ತಿಗಳ ನಡುವಿನ ಸಂಭಾಷಣೆಯನ್ನು ಹೊಂದಿರುವ ಆಡಿಯೊ ಕ್ಲಿಪ್ ವೈರಲ್‌ ಆಗಿದೆ.

ಆಡಿಯೊವನ್ನು ಉಲ್ಲೇಖಿಸಿರುವ ಸಿಸೋಡಿಯಾ, “‘ಶಾಹ್ ಜಿ’ ಎಂಬವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದರೆ, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಏಕೆಂದರೆ ಒಬ್ಬ ದಲ್ಲಾಳಿ, ಶಾಸಕನನ್ನು ಖರೀದಿಸಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿಬಂದರೆ ಅದು ಇಡೀ ದೇಶಕ್ಕೆ ಅಪಾಯಕಾರಿ” ಎಂದು ಎಚ್ಚರಿಸಿದ್ದಾರೆ.

ಕಳೆದ ಬುಧವಾರ ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷದ ಶಾಸಕರನ್ನು ಬಿಜೆಪಿಗೆ ಸೆಳೆಯುವ ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿತ್ತು. ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದ ಪೊಲೀಸರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದರಿಂದ ಈ ಮೂವರು ಹೊರಬರಲು ಸಾಧ್ಯವಾಯಿತು.

ಆರೋಪಿಗಳನ್ನು ಹೈದರಾಬಾದ್ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಬಂಧಿಸಲಾಗಿತ್ತು. ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಬಿಜೆಪಿಗೆ ಸೆಳೆಯಲು ಲಂಚ ನೀಡುತ್ತಿದ್ದ ವೇಳೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದರು.

ತೆಲಂಗಾಣದಲ್ಲಿ ಬಿಜೆಪಿ ನಡೆಸುತ್ತಿರುವ ‘ಆಪರೇಷನ್ ಕಮಲ’ವನ್ನು ಉಲ್ಲೇಖಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಸೋಡಿಯಾ, “ಅಕ್ಟೋಬರ್ 27ರಂದು ಸೈಬರಾಬಾದ್‌ನಲ್ಲಿ ದಾಳಿ ನಡೆಸಿದಾಗ ಮೂವರು ಪಿಂಪ್‌ಗಳು ₹ 100 ಕೋಟಿಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ನಿಮ್ಮಲ್ಲಿ ಕೆಲವರು ವರದಿ ಮಾಡಿದ್ದರು. ಈ ದಲ್ಲಾಳಿಗಳು ಬಿಜೆಪಿಯ ಆಪರೇಷನ್ ಕಮಲವನ್ನು ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಮೂವರು ಬ್ರೋಕರ್‌ಗಳು- ರಾಮಚಂದ್ರ ಭಾರತಿ, ಸಿಮಯ್ಯ ಮತ್ತು ನಂದ್ ಕುಮಾರ್” ಎಂದು ಮಾಹಿತಿ ನೀಡಿದ್ದಾರೆ.

ಬಂಧಿತ ಮೂವರು ವ್ಯಕ್ತಿಗಳು ಮತ್ತು ಟಿಆರ್‌ಎಸ್‌ನ ಕೆಲವು ಶಾಸಕರ ನಡುವಿನ ಸಂಭಾಷಣೆಗಳ ಆಡಿಯೊ ರೆಕಾರ್ಡಿಂಗ್ ಸಂಬಂಧಿಸಿದಂತೆ ಸಿಸೋಡಿಯಾ ಮಾತನಾಡಿ, “ಅಕ್ಟೋಬರ್ 28 ರಂದು, ಅವರ ಸಂಪೂರ್ಣ ಸಂಭಾಷಣೆಯ ಆಡಿಯೋ ಹೊರಬಂದಿದೆ” ಎಂದಿದ್ದಾರೆ.

ದೆಹಲಿಯಲ್ಲಿ ನಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಶಾಸಕರಿಗೆ ₹ 20 ಕೋಟಿ ನೀಡಲು ಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ನಾಯಕರು ಕಳೆದ ಆಗಸ್ಟ್‌ನಲ್ಲಿ ಆರೋಪಿಸಿದ್ದರು. ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿತ್ತು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಎಎಪಿಯ ದೆಹಲಿ ಶಾಸಕರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಪ್ರಯತ್ನಿಸಿತ್ತು ಎಂಬ ಆರೋಪವನ್ನು ಉಲ್ಲೇಖಿಸಿದ ಸಿಸೋಡಿಯಾ, “ಇಂದು ಎರಡನೇ ಆಡಿಯೋ ರೆಕಾರ್ಡಿಂಗ್ ಹೊರಬಿದ್ದಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇಂದು ಹೊಸ ಆಡಿಯೋ ಹೊರಬಿದ್ದಿದೆ. ಇದು ತೆಲಂಗಾಣದ ಶಾಸಕರು ಮತ್ತು ಆಪರೇಷನ್ ಕಮಲದ ನಡುವಿನ ಸಂಭಾಷಣೆಯಾಗಿದೆ. ದೆಹಲಿಯಲ್ಲೂ ಇದಕ್ಕೆ ಪ್ರಯತ್ನಿಸಲಾಗಿದೆ ಎಂದು ಮೂವರಲ್ಲಿ ಒಬ್ಬರು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

“ಈ ಶಾಸಕರನ್ನು ಖರೀದಿಸಲು ₹ 1,075 ಕೋಟಿ ವ್ಯವಸ್ಥೆ ಮಾಡಿದ್ದಾರೆಂಬುದು ಸದ್ಯದ ಪ್ರಶ್ನೆ, ಇದು ಯಾರ ಹಣ ಮತ್ತು ಎಲ್ಲಿಂದ ಬಂತು?” ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...