Homeಮುಖಪುಟಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

- Advertisement -
- Advertisement -

#ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿದೆ. ಮಧ್ಯಾಹ್ನದಿಂದ ಸಂಜೆಯವರೆಗೂ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದ್ದು, ಈ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು ಮೂರು ಲಕ್ಷ ಟ್ವೀಟ್‌ಗಳು ದಾಖಲಾಗಿವೆ.

ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸಿದ್ದಾರೆ. ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿವೆ.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ ಗೋಸ್ವಾಮಿ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ಗೋಸ್ವಾಮಿಯವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತುಷ್ಟು ಜನರು ನಿಜವಾದ ಪತ್ರಕರ್ತರೆಂದರೆ ಅದು ಎನ್‌ಡಿಟಿವಿಯ ರವೀಶ್‌ ಕುಮಾರ್‌ರವರು. ಅರ್ನಬ್‌ ಏನಿದ್ದರೂ ರಬ್ಬೀಶ್‌ ಎಂದು ಟೀಕಿಸಿದ್ದಾರೆ. ಕೆಲ ಟ್ವೀಟ್‌ಗಳು ಈ ಕೆಳಗಿನಂತಿವೆ.

ಅರ್ನಬ್ ಗೋಸ್ವಾಮಿ ಅವರಿಂದ ಸೋನಿಯಾ ಗಾಂಧಿಯವರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ. ಅವನು ಹುಚ್ಚನಾಗಿದ್ದಾನೆ ಮತ್ತು ಎಲ್ಲಾ ಮಿತಿಗಳನ್ನು ದಾಟಿದ್ದಾನೆ, ಅವನು ತನ್ನ ಬಗ್ಗೆ ನಾಚಿಕೆಪಡಬೇಕು. ನಾನು ಸಂಪಾದಕರ ಸಂಘವನ್ನು ಕೇಳುತ್ತೇನೆ, ಇದು ಪತ್ರಿಕೋದ್ಯಮಕ್ಕೆ ಸಾರ್ವಕಾಲಿಕ ಅವಮಾನವಲ್ಲವೇ? ರಾಜೀವ್ ಚಂದ್ರಶೇಖರ್ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ರಾಜಸ್ತಾನ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಇದೇ ಸಮಯದಲ್ಲಿ ಐ ಸಪೋರ್ಟ್‌ ಅರ್ನಬ್‌ ಗೋಸ್ವಾಮಿ ಎಂದು ಸುಮಾರು 2 ಲಕ್ಷ ಟ್ವೀಟ್‌ಗಳು ಸಹ ದಾಖಲಾಗಿವೆ. ಯಾವಾಗ ಅವರ ವಿರುದ್ಧ ಟೀಕೆಗಳು ಜೋರಾಯಿತೊ ನಂತರ ಅವರ ಅಭಿಮಾನಿಗಳು ಅವರ ಪರ ಟ್ವಿಟ್ಟರ್‌ ಟ್ರೆಂಡ್‌ಗೆ ಇಳಿದಿದ್ದಾರೆ.


ಇದನ್ನೂ ಓದಿ: ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರ್ನಬ್ ಗೋಸ್ವಾಮಿ ಪತ್ರಕರ್ತನ ವೃತ್ತಿಗೆ ಲಾಯಕ್ಕಾದವನಲ್ಲ. ಅವನು ಬಿ.ಜೆ.ಪಿ.ಯ ವಕ್ತಾರನಾಗಲಿ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...