Homeಮುಖಪುಟಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

- Advertisement -
- Advertisement -

#ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿದೆ. ಮಧ್ಯಾಹ್ನದಿಂದ ಸಂಜೆಯವರೆಗೂ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದ್ದು, ಈ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು ಮೂರು ಲಕ್ಷ ಟ್ವೀಟ್‌ಗಳು ದಾಖಲಾಗಿವೆ.

ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸಿದ್ದಾರೆ. ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿವೆ.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ ಗೋಸ್ವಾಮಿ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ಗೋಸ್ವಾಮಿಯವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತುಷ್ಟು ಜನರು ನಿಜವಾದ ಪತ್ರಕರ್ತರೆಂದರೆ ಅದು ಎನ್‌ಡಿಟಿವಿಯ ರವೀಶ್‌ ಕುಮಾರ್‌ರವರು. ಅರ್ನಬ್‌ ಏನಿದ್ದರೂ ರಬ್ಬೀಶ್‌ ಎಂದು ಟೀಕಿಸಿದ್ದಾರೆ. ಕೆಲ ಟ್ವೀಟ್‌ಗಳು ಈ ಕೆಳಗಿನಂತಿವೆ.

ಅರ್ನಬ್ ಗೋಸ್ವಾಮಿ ಅವರಿಂದ ಸೋನಿಯಾ ಗಾಂಧಿಯವರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ. ಅವನು ಹುಚ್ಚನಾಗಿದ್ದಾನೆ ಮತ್ತು ಎಲ್ಲಾ ಮಿತಿಗಳನ್ನು ದಾಟಿದ್ದಾನೆ, ಅವನು ತನ್ನ ಬಗ್ಗೆ ನಾಚಿಕೆಪಡಬೇಕು. ನಾನು ಸಂಪಾದಕರ ಸಂಘವನ್ನು ಕೇಳುತ್ತೇನೆ, ಇದು ಪತ್ರಿಕೋದ್ಯಮಕ್ಕೆ ಸಾರ್ವಕಾಲಿಕ ಅವಮಾನವಲ್ಲವೇ? ರಾಜೀವ್ ಚಂದ್ರಶೇಖರ್ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ರಾಜಸ್ತಾನ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಇದೇ ಸಮಯದಲ್ಲಿ ಐ ಸಪೋರ್ಟ್‌ ಅರ್ನಬ್‌ ಗೋಸ್ವಾಮಿ ಎಂದು ಸುಮಾರು 2 ಲಕ್ಷ ಟ್ವೀಟ್‌ಗಳು ಸಹ ದಾಖಲಾಗಿವೆ. ಯಾವಾಗ ಅವರ ವಿರುದ್ಧ ಟೀಕೆಗಳು ಜೋರಾಯಿತೊ ನಂತರ ಅವರ ಅಭಿಮಾನಿಗಳು ಅವರ ಪರ ಟ್ವಿಟ್ಟರ್‌ ಟ್ರೆಂಡ್‌ಗೆ ಇಳಿದಿದ್ದಾರೆ.


ಇದನ್ನೂ ಓದಿ: ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರ್ನಬ್ ಗೋಸ್ವಾಮಿ ಪತ್ರಕರ್ತನ ವೃತ್ತಿಗೆ ಲಾಯಕ್ಕಾದವನಲ್ಲ. ಅವನು ಬಿ.ಜೆ.ಪಿ.ಯ ವಕ್ತಾರನಾಗಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...