Homeಮುಖಪುಟದುಷ್ಕರ್ಮಿ ಗುಂಡು ಹಾರಿಸುವಾಗ ಪೊಲೀಸರು ಕೈಕಟ್ಟಿ ನಿಂತಿದ್ದೇಕೆ? ದೆಹಲಿ ಪೊಲೀಸರ ವಿರುದ್ಧ ದೇಶವ್ಯಾಪಿ ಖಂಡನೆ

ದುಷ್ಕರ್ಮಿ ಗುಂಡು ಹಾರಿಸುವಾಗ ಪೊಲೀಸರು ಕೈಕಟ್ಟಿ ನಿಂತಿದ್ದೇಕೆ? ದೆಹಲಿ ಪೊಲೀಸರ ವಿರುದ್ಧ ದೇಶವ್ಯಾಪಿ ಖಂಡನೆ

ಇದಕ್ಕೆ ಪ್ರೇರೇಪಣೆ ಕೊಟ್ಟಿದ್ದಕ್ಕಾಗಿ ಅನುರಾಗ್ ಠಾಕೂರ್ ಅವರನ್ನು ಈಗ ಬಂಧಿಸಲಾಗುತ್ತದೆಯೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ್ದು, ಅದನ್ನು ತಡೆಯದೇ ಕೈಕಟ್ಟಿ ನಿಂತಿದ್ದ ಪೊಲೀಸರ ವಿರುದ್ಧ ದೇಶಾವ್ಯಾಪಿ ಖಂಡನೆ ವ್ಯಕ್ತವಾಗಿದೆ.

ಕೆಲ ದಿನಗಳ ಹಿಂದೆ ಅನುರಾಗ್ ಠಾಕೂರ್ ’ದೇಶ್ ಕೆ ಗಡ್ಡಾರೊ ಕೊ ಗೋಲಿ ಮಾರೊ ಸಾಲೋ ಕೋ’ (ದೇಶದೊಳಗಿನ ದೇಶದ್ರೋಹಿಗಳನ್ನು ಗುಂಡು ಹೊಡೆದು ಸಾಯಿಸಿ) ಎಂದು ಘೋಷಣೆ ಕೂಗಿದ್ದರು. ಇಂದು ನಾನು ನಿಮಗೆ ಅಜಾದಿ ನೀಡುತ್ತೇನೆ ಎಂದು ಕೂಗುತ್ತಾ ಜಾಮಿಯಾ ವಿದ್ಯಾರ್ಥಿಗಳ ಮೇಲೆ ಒಬ್ಬ ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರೇರೇಪಣೆ ಕೊಟ್ಟಿದ್ದಕ್ಕಾಗಿ ಅನುರಾಗ್ ಠಾಕೂರ್ ಅವರನ್ನು ಈಗ ಬಂಧಿಸಲಾಗುತ್ತದೆಯೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಗಾಂಧಿಯವರ ಮರಣದಿನದಂದು ಒಬ್ಬ ವ್ಯಕ್ತಿಯು ಸಾರ್ವಜನಿಕವಾಗಿ ಬಂದೂಕಿನಿಂದ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸುತ್ತಾನೆ. ಬಿಜೆಪಿ ನಿಯಂತ್ರಿತ ದೆಹಲಿ ಪೊಲೀಸರು ಹಿಂದೆ ನಿಂತು ಅವನನ್ನು ನೋಡುತ್ತಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ನಾಯಕರು ಗೋಲಿ ಮಾರೊ ಎಂಬ ಘೋಷಣೆಗಳನ್ನು ಕೂಗಿದ್ದರು. ಈ ಪಕ್ಷವು ಇಡೀ ರಾಷ್ಟ್ರವನ್ನು ರಾಜಕೀಯಕ್ಕಾಗಿ ಸುಡಬಹುದು ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಕಿಡಿಕಾರಿದ್ದಾರೆ.

ಅಸಾದುದ್ದೀನ್‌ ಒವೈಸಿ ಟ್ವೀಟ್‌ ಮಾಡಿ, “ದೆಹಲಿ ಪೊಲೀಸರೆ, ಕಳೆದ ತಿಂಗಳು ಜಾಮಿಯಾದಲ್ಲಿ ವಿದ್ಯಾರ್ಥಿಗಳ ಮೇಲೆ ನೀವು ತೋರಿಸಿದ ಧೈರ್ಯಶಾಲಿ ಏನಾಯಿತು? ‘ಅಸಹಾಯಕ’ ಪ್ರೇಕ್ಷಕರಾಗಿರುವುದಕ್ಕೆ ಬಹುಮಾನವಿದ್ದರೆ, ನೀವು ಅದನ್ನು ಪ್ರತಿ ಬಾರಿಯೂ ಗೆಲ್ಲುತ್ತೀರಿ. ಗುಂಡೇಟಿಗೆ ಬಲಿಯಾದವನು ಬ್ಯಾರಿಕೇಡ್‌ನ ಮೇಲೆ ಹತ್ತಲು ಏಕೆ ಬಿಟ್ಟಿರಿ ಎಂಬುದನ್ನು ನೀವು ವಿವರಿಸಬಹುದೇ? ನಿಮ್ಮ ಸೇವಾ ನಿಯಮಗಳು ನಿಮ್ಮನ್ನು ಮಾನವೀಯತೆಯಿಂದ ತಡೆಯುತ್ತವೆಯೇ?” ಎಂದು ಪ್ರಶ್ನಿಸಿದ್ದಾರೆ.

ಅರೆಸ್ಟ್‌ ಅನುರಾಗ್‌ ಠಾಕೂರ್‌ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಈ ಘಟನೆಗೆ ಅವರೆ  ಹೊಣೆಹೊರಬೇಕು, ಅವರನ್ನು ಬಂಧಿಸಬೇಕು ಎಂಬ ಒತ್ತಾಯ ಬಲವಾಗಿ ಕೇಳಿಬಂದಿದೆ.

ಪ್ರತಿಭಟನಾಕಾರರ ಮೇಲೆ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದ ವ್ಯಕ್ತಿಯನ್ನು ಗೋಪಾಲ್‌ ಎಂದು ಗುರುತಿಸಲಾಗಿದ್ದು ಸದ್ಯಕ್ಕೆ ಪೊಲೀಸ್‌ ಕಸ್ಟಡಿಯಲ್ಲಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...