Homeಚಳವಳಿಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ಆರೋಪಿಗಳು ನಾಡಿನ ಕ್ಷಮೆ ಕೇಳಬೇಕು - ಸಿ.ಎಸ್ ದ್ವಾರಕನಾಥ್

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಪ್ರತಿಭಟನಾಕಾರರು ಸಮಾಧಿ ಸ್ಥಳದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿವರೆಗೆ ಸಾಗಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಮಾತನಾಡಿ “ನೊಂದವರಿಗೆ ನ್ಯಾಯ ನೀಡಲು ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯವೆಸಗಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವೆಂಬರ್ 21 ಈ ಘಟನೆ ನಡೆದಾಗ ಮಾಹಿತಿ ತಿಳಿದು ನಾನು ಜಾಗಕ್ಕೆ ಬರುವಷ್ಟರಲ್ಲಿ ಎಲ್ಲಾ ಸಮಾಧಿಗಳನ್ನು ಧ್ವಂಸಗೊಳಿಸಿಬಿಟ್ಟಿದ್ದರು. ಸ್ಥಳದಲ್ಲಿ ಗಣೇಶ್ ಹುಲುಮನೆ ಎಂಬುವವರಿದ್ದರು. ಏಕೆ ನಮ್ಮ ತಂದೆಯವರ ಸಮಾಧಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅದರ ಮಾರನೇಯ ದಿನ ಎಸ್‌ಪಿಯವರನ್ನು ಭೇಟಿಯಾಗಿ ದೂರು ನೀಡಿದ್ದೇವೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಅವರ ಬಳಿ 1955ರ ಕಾಲದಿಂದಲೂ ದಾಖಲೆಗಳಿವೆ ಎನ್ನುತ್ತಿದ್ದಾರೆ. ಆದರೆ ಇದು ಸಿವಿಲ್ ವಿಷಯವಾಗಿದ್ದು ನಾವು ಕೋರ್ಟ್‌ನಲ್ಲಿ ಅದನ್ನು ಪರಿಹರಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ನಮ್ಮ ತಂದೆಯವರು ಸೇರಿ ನಮ್ಮ ಕುಟುಂಬದ ನಾಲ್ವರ ಸಮಾಧಿಗಳಿವೆ. ಇಷ್ಟು ಸಮಾಧಿಗಳನ್ನು ನಾವು 1990ರಿಂದ ಕಟ್ಟುವಾಗ ಅವರು ದಾಖಲೆಗಳಿದ್ದರೂ ಏಕೆ ಸುಮ್ಮನಿದ್ದರು? ಈ ಜಮೀನಿನ ಖಾತೆ ನಮ್ಮ ಅಣ್ಣನ ಹೆಸರಿನಲ್ಲಿದೆ. ನಾವು ಇದುವರೆಗೂ ಕಂದಾಯ ಸಹ ಕಟ್ಟುತ್ತಿದ್ದೇವೆ. 2012ರವರೆಗೂ ಪಹಣಿ ಸಹ ಅವರ ಹೆಸರಿನಲ್ಲಿತ್ತು. ಆದರೆ 2013ರಲ್ಲಿ ಪಹಣಿಯನ್ನು ರವಿಕುಮಾರ್ ಎಂಬುವವರ ಹೆಸರಿಗೆ ಹೇಗೆ ಮಾಡಲಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇದನ್ನು ಪರೀಶಿಲೀಸಬೇಕು, ನಕಲಿ ದಾಖಲೆ ಸೃಷ್ಟಿಸಿದವರು ಮತ್ತು ಅದರಲ್ಲಿ ಭಾಗಿಯಾದ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್‌ರವರು ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಒಂದು ಬಲಿಷ್ಠ ಸರ್ಕಾರವಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಹಾಗಾಗಿ ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದೆ. ಸಮಾಧಿ ಧ್ವಂಸಮಾಡಿ ಮೂರು ದಿನವಾದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಇದು ಏಕೆ ಎಂದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲನೇಯದಾಗಿ ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...