Homeಚಳವಳಿಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ಆರೋಪಿಗಳು ನಾಡಿನ ಕ್ಷಮೆ ಕೇಳಬೇಕು - ಸಿ.ಎಸ್ ದ್ವಾರಕನಾಥ್

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಪ್ರತಿಭಟನಾಕಾರರು ಸಮಾಧಿ ಸ್ಥಳದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿವರೆಗೆ ಸಾಗಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಮಾತನಾಡಿ “ನೊಂದವರಿಗೆ ನ್ಯಾಯ ನೀಡಲು ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯವೆಸಗಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವೆಂಬರ್ 21 ಈ ಘಟನೆ ನಡೆದಾಗ ಮಾಹಿತಿ ತಿಳಿದು ನಾನು ಜಾಗಕ್ಕೆ ಬರುವಷ್ಟರಲ್ಲಿ ಎಲ್ಲಾ ಸಮಾಧಿಗಳನ್ನು ಧ್ವಂಸಗೊಳಿಸಿಬಿಟ್ಟಿದ್ದರು. ಸ್ಥಳದಲ್ಲಿ ಗಣೇಶ್ ಹುಲುಮನೆ ಎಂಬುವವರಿದ್ದರು. ಏಕೆ ನಮ್ಮ ತಂದೆಯವರ ಸಮಾಧಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅದರ ಮಾರನೇಯ ದಿನ ಎಸ್‌ಪಿಯವರನ್ನು ಭೇಟಿಯಾಗಿ ದೂರು ನೀಡಿದ್ದೇವೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಅವರ ಬಳಿ 1955ರ ಕಾಲದಿಂದಲೂ ದಾಖಲೆಗಳಿವೆ ಎನ್ನುತ್ತಿದ್ದಾರೆ. ಆದರೆ ಇದು ಸಿವಿಲ್ ವಿಷಯವಾಗಿದ್ದು ನಾವು ಕೋರ್ಟ್‌ನಲ್ಲಿ ಅದನ್ನು ಪರಿಹರಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ನಮ್ಮ ತಂದೆಯವರು ಸೇರಿ ನಮ್ಮ ಕುಟುಂಬದ ನಾಲ್ವರ ಸಮಾಧಿಗಳಿವೆ. ಇಷ್ಟು ಸಮಾಧಿಗಳನ್ನು ನಾವು 1990ರಿಂದ ಕಟ್ಟುವಾಗ ಅವರು ದಾಖಲೆಗಳಿದ್ದರೂ ಏಕೆ ಸುಮ್ಮನಿದ್ದರು? ಈ ಜಮೀನಿನ ಖಾತೆ ನಮ್ಮ ಅಣ್ಣನ ಹೆಸರಿನಲ್ಲಿದೆ. ನಾವು ಇದುವರೆಗೂ ಕಂದಾಯ ಸಹ ಕಟ್ಟುತ್ತಿದ್ದೇವೆ. 2012ರವರೆಗೂ ಪಹಣಿ ಸಹ ಅವರ ಹೆಸರಿನಲ್ಲಿತ್ತು. ಆದರೆ 2013ರಲ್ಲಿ ಪಹಣಿಯನ್ನು ರವಿಕುಮಾರ್ ಎಂಬುವವರ ಹೆಸರಿಗೆ ಹೇಗೆ ಮಾಡಲಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇದನ್ನು ಪರೀಶಿಲೀಸಬೇಕು, ನಕಲಿ ದಾಖಲೆ ಸೃಷ್ಟಿಸಿದವರು ಮತ್ತು ಅದರಲ್ಲಿ ಭಾಗಿಯಾದ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್‌ರವರು ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಒಂದು ಬಲಿಷ್ಠ ಸರ್ಕಾರವಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಹಾಗಾಗಿ ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದೆ. ಸಮಾಧಿ ಧ್ವಂಸಮಾಡಿ ಮೂರು ದಿನವಾದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಇದು ಏಕೆ ಎಂದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲನೇಯದಾಗಿ ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...