Homeಚಳವಳಿಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ಆರೋಪಿಗಳು ನಾಡಿನ ಕ್ಷಮೆ ಕೇಳಬೇಕು - ಸಿ.ಎಸ್ ದ್ವಾರಕನಾಥ್

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಪ್ರತಿಭಟನಾಕಾರರು ಸಮಾಧಿ ಸ್ಥಳದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿವರೆಗೆ ಸಾಗಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಮಾತನಾಡಿ “ನೊಂದವರಿಗೆ ನ್ಯಾಯ ನೀಡಲು ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯವೆಸಗಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವೆಂಬರ್ 21 ಈ ಘಟನೆ ನಡೆದಾಗ ಮಾಹಿತಿ ತಿಳಿದು ನಾನು ಜಾಗಕ್ಕೆ ಬರುವಷ್ಟರಲ್ಲಿ ಎಲ್ಲಾ ಸಮಾಧಿಗಳನ್ನು ಧ್ವಂಸಗೊಳಿಸಿಬಿಟ್ಟಿದ್ದರು. ಸ್ಥಳದಲ್ಲಿ ಗಣೇಶ್ ಹುಲುಮನೆ ಎಂಬುವವರಿದ್ದರು. ಏಕೆ ನಮ್ಮ ತಂದೆಯವರ ಸಮಾಧಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅದರ ಮಾರನೇಯ ದಿನ ಎಸ್‌ಪಿಯವರನ್ನು ಭೇಟಿಯಾಗಿ ದೂರು ನೀಡಿದ್ದೇವೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಅವರ ಬಳಿ 1955ರ ಕಾಲದಿಂದಲೂ ದಾಖಲೆಗಳಿವೆ ಎನ್ನುತ್ತಿದ್ದಾರೆ. ಆದರೆ ಇದು ಸಿವಿಲ್ ವಿಷಯವಾಗಿದ್ದು ನಾವು ಕೋರ್ಟ್‌ನಲ್ಲಿ ಅದನ್ನು ಪರಿಹರಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ನಮ್ಮ ತಂದೆಯವರು ಸೇರಿ ನಮ್ಮ ಕುಟುಂಬದ ನಾಲ್ವರ ಸಮಾಧಿಗಳಿವೆ. ಇಷ್ಟು ಸಮಾಧಿಗಳನ್ನು ನಾವು 1990ರಿಂದ ಕಟ್ಟುವಾಗ ಅವರು ದಾಖಲೆಗಳಿದ್ದರೂ ಏಕೆ ಸುಮ್ಮನಿದ್ದರು? ಈ ಜಮೀನಿನ ಖಾತೆ ನಮ್ಮ ಅಣ್ಣನ ಹೆಸರಿನಲ್ಲಿದೆ. ನಾವು ಇದುವರೆಗೂ ಕಂದಾಯ ಸಹ ಕಟ್ಟುತ್ತಿದ್ದೇವೆ. 2012ರವರೆಗೂ ಪಹಣಿ ಸಹ ಅವರ ಹೆಸರಿನಲ್ಲಿತ್ತು. ಆದರೆ 2013ರಲ್ಲಿ ಪಹಣಿಯನ್ನು ರವಿಕುಮಾರ್ ಎಂಬುವವರ ಹೆಸರಿಗೆ ಹೇಗೆ ಮಾಡಲಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇದನ್ನು ಪರೀಶಿಲೀಸಬೇಕು, ನಕಲಿ ದಾಖಲೆ ಸೃಷ್ಟಿಸಿದವರು ಮತ್ತು ಅದರಲ್ಲಿ ಭಾಗಿಯಾದ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್‌ರವರು ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಒಂದು ಬಲಿಷ್ಠ ಸರ್ಕಾರವಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಹಾಗಾಗಿ ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದೆ. ಸಮಾಧಿ ಧ್ವಂಸಮಾಡಿ ಮೂರು ದಿನವಾದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಇದು ಏಕೆ ಎಂದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲನೇಯದಾಗಿ ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...