Homeಚಳವಳಿಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ಆರೋಪಿಗಳು ನಾಡಿನ ಕ್ಷಮೆ ಕೇಳಬೇಕು - ಸಿ.ಎಸ್ ದ್ವಾರಕನಾಥ್

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಪ್ರತಿಭಟನಾಕಾರರು ಸಮಾಧಿ ಸ್ಥಳದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿವರೆಗೆ ಸಾಗಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಮಾತನಾಡಿ “ನೊಂದವರಿಗೆ ನ್ಯಾಯ ನೀಡಲು ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯವೆಸಗಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವೆಂಬರ್ 21 ಈ ಘಟನೆ ನಡೆದಾಗ ಮಾಹಿತಿ ತಿಳಿದು ನಾನು ಜಾಗಕ್ಕೆ ಬರುವಷ್ಟರಲ್ಲಿ ಎಲ್ಲಾ ಸಮಾಧಿಗಳನ್ನು ಧ್ವಂಸಗೊಳಿಸಿಬಿಟ್ಟಿದ್ದರು. ಸ್ಥಳದಲ್ಲಿ ಗಣೇಶ್ ಹುಲುಮನೆ ಎಂಬುವವರಿದ್ದರು. ಏಕೆ ನಮ್ಮ ತಂದೆಯವರ ಸಮಾಧಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅದರ ಮಾರನೇಯ ದಿನ ಎಸ್‌ಪಿಯವರನ್ನು ಭೇಟಿಯಾಗಿ ದೂರು ನೀಡಿದ್ದೇವೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಅವರ ಬಳಿ 1955ರ ಕಾಲದಿಂದಲೂ ದಾಖಲೆಗಳಿವೆ ಎನ್ನುತ್ತಿದ್ದಾರೆ. ಆದರೆ ಇದು ಸಿವಿಲ್ ವಿಷಯವಾಗಿದ್ದು ನಾವು ಕೋರ್ಟ್‌ನಲ್ಲಿ ಅದನ್ನು ಪರಿಹರಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ನಮ್ಮ ತಂದೆಯವರು ಸೇರಿ ನಮ್ಮ ಕುಟುಂಬದ ನಾಲ್ವರ ಸಮಾಧಿಗಳಿವೆ. ಇಷ್ಟು ಸಮಾಧಿಗಳನ್ನು ನಾವು 1990ರಿಂದ ಕಟ್ಟುವಾಗ ಅವರು ದಾಖಲೆಗಳಿದ್ದರೂ ಏಕೆ ಸುಮ್ಮನಿದ್ದರು? ಈ ಜಮೀನಿನ ಖಾತೆ ನಮ್ಮ ಅಣ್ಣನ ಹೆಸರಿನಲ್ಲಿದೆ. ನಾವು ಇದುವರೆಗೂ ಕಂದಾಯ ಸಹ ಕಟ್ಟುತ್ತಿದ್ದೇವೆ. 2012ರವರೆಗೂ ಪಹಣಿ ಸಹ ಅವರ ಹೆಸರಿನಲ್ಲಿತ್ತು. ಆದರೆ 2013ರಲ್ಲಿ ಪಹಣಿಯನ್ನು ರವಿಕುಮಾರ್ ಎಂಬುವವರ ಹೆಸರಿಗೆ ಹೇಗೆ ಮಾಡಲಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇದನ್ನು ಪರೀಶಿಲೀಸಬೇಕು, ನಕಲಿ ದಾಖಲೆ ಸೃಷ್ಟಿಸಿದವರು ಮತ್ತು ಅದರಲ್ಲಿ ಭಾಗಿಯಾದ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್‌ರವರು ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಒಂದು ಬಲಿಷ್ಠ ಸರ್ಕಾರವಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಹಾಗಾಗಿ ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದೆ. ಸಮಾಧಿ ಧ್ವಂಸಮಾಡಿ ಮೂರು ದಿನವಾದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಇದು ಏಕೆ ಎಂದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲನೇಯದಾಗಿ ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...