Homeಕರ್ನಾಟಕಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಪಕ್ಷವು ಖಂಡಿಸಿದೆ.

- Advertisement -
- Advertisement -

ಶೃಂಗೇರಿಯಲ್ಲಿ ಶಂಕರಾಚಾರ್ಯ ಗೋಪುರದ ಮೇಲೆ ಬಾವುಟವನ್ನು ಹಾಕಿದ್ದನ್ನು ಎಸ್ಡಿಪಿಐ ಪಕ್ಷದ ಹಾಗೂ ಸ್ಥಳೀಯ ಮುಸ್ಲಿಂ ಸಮುದಾಯದ ತಲೆಗೆ ಕಟ್ಟಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಹಾಗೂ ಸಂಗಡಿಗರ ಮೇಲೆ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಸಮಿತಿ ಆಗ್ರಹಿಸಿದೆ.

ಘಟನೆಯನ್ನು ಅತ್ಯಂತ ಕಳವಳಕಾರಿಯೂ ಗಂಭೀರವೂ ಆಗಿದೆ ಎಂದಿರುವ ಪಕ್ಷವು ಇದು ಸಮಾಜದಲ್ಲಿ ಮುಸ್ಲಿಮರ ಬಗ್ಗೆ ದ್ವೇಷ ಹುಟ್ಟಿಸುವ ಉದ್ದೇಶಪೂರ್ವಕ ಕೃತ್ಯವಾಗಿದೆ ಹಾಗೂ ಕೋಮು ಸೌಹಾರ್ದತೆಯನ್ನು ಕೆಡಿಸಿ ಸಮಾಜದ ಶಾಂತಿ ಹಾಗೂ ನೆಮ್ಮದಿ ಕೆಡಿಸುವ ಷಡ್ಯಂತ್ರವೂ ಆಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಉಲ್ಲೇಖಿಸಿದ ಪಕ್ಷವು, “ಅವರ ಮೇಲೆ ಸ್ವಯಂ ಪ್ರಕರಣ ದಾಖಲಿಸಬೇಕಾದ ಪ್ರಕರಣ ಇದಾಗಿದ್ದರೂ ಪೋಲೀಸರಿಂದ ಇನ್ನೂ ದೂರು ದಾಖಲಾಗಿಲ್ಲ. ಮುಸ್ಲಿಮರು ಕೂಡಾ ದೂರು ದಾಖಲು ಮಾಡಿದ್ದರು ಈವರೆಗೂ ಪೋಲೀಸರು ಎಫ್ಐಆರ್ ದಾಖಲಿಸಲಿಲ್ಲ. ಪೋಲೀಸರಿಗೆ ಧಮಕಿ ಹಾಕಿದ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸದ ಜೀವರಾಜ್ ಹಾಗೂ ಆತನ ಸಂಗಡಿಗರ ಮೇಲೆ ದೂರು ದಾಖಲಿಸಿದರೂ ಪೊಲೀಸರು ಎಫ್ಐಆರ್ ಮಾಡಿಲ್ಲ. ಇದು ಅತ್ಯಂತ ಅನ್ಯಾಯವಾಗಿದೆಯಲ್ಲದೆ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಲ್ಲಿ ಅಭದ್ರತೆಯನ್ನು ಹಾಗೂ ಪ್ರಶ್ನೆಯನ್ನು ಹುಟ್ಟುಹಾಕಿದೆ” ಎಂದು ಹೇಳಿದೆ.

“ಪೊಲೀಸರು ಸ್ಥಳೀಯ ಮೂವರು ಮುಸ್ಲಿಂ ಯುವಕರ ಮೇಲೆ ಎಫ್ಐಆರ್ ದಾಖಲಿಸಿ ಅಂದು ರಾತ್ರಿ ಇಡೀ ಠಾಣೆಯಲ್ಲಿ ಕೂಡಿಹಾಕಿದ್ದರು. ಆ ಬಾವುಟವು ಎಸ್ಡಿಪಿಐ ಪಕ್ಷದ್ದಾಗಿರಲಿಲ್ಲ. ಅದು ಶೃಂಗೇರಿಯ ಮಸೀದಿಯಲ್ಲಿ ಕಟ್ಟಿದ ಬಾವುಟವಾಗಿತ್ತು. ಮಸೀದಿಯ ಸಿಸಿಟಿವಿಯನ್ನು ಪರಿಶೀಲಿಸಿದಾಗ ಮನೋಹರ್ ಯಾನೆ ಮಿಲಿಂದ್ ಎಂಬಾತನು ಮಾಡಿದ್ದು ಕಂಡು ಬಂತು. ಒಂದು ವೇಳೆ ಮಸೀದಿಯಲ್ಲಿ ಸಿಸಿಟಿವಿ ಇಲ್ಲದಿದ್ದಲ್ಲಿ ಆ ಕೃತ್ಯ ಮುಸ್ಲಿಂ ಹುಡುಗರು ಮಾಡಿದ್ದೆಂದು ಮತ್ತು ಅದರಿಂದ ಶೃಂಗೇರಿಯಲ್ಲಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇತ್ತು.” ಎಂದು ಪಕ್ಷ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯಲ್ಲಿ ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಸಂಚು ಹೂಡಿದ ಮಿಲಿಂದ್, ಜೀವರಾಜ್ ಮತ್ತು ಅವರ ಸಂಗಡಿಗರ ಮೇಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆಗೆ ಅಡ್ಡಿಯಾಗಿರುವುದು ಏನು ಎನ್ನುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದ ಪಕ್ಷವು ಮಿಲಿಂದ್, ಜೀವರಾಜ್ ಮತ್ತು ಸಂಗಡಿಗರ ಮೇಲೆ ಕೂಡಲೇ ಎಫ್ಐಆರ್ ದಾಖಲಿಸಬೇಕು ಹಾಗೂ ಅವರನ್ನು ಬಂಧಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲೆತ್ನಿಸಿದ ಅವರ ಸಂಚನ್ನು ಹಾಗೂ ಅವರ ಹಿಂದಿರುವ ಶಕ್ತಿಯನ್ನು ಪೊಲೀಸರು ಬಯಲಿಗೆಳೆಯಬೇಕೆಂದು ಕೋರಿದೆ.

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಝ್ಮತ್ ಪಾಷಾ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸಿಕಂದರ್ ಪಾಷಾ ಉಪಸ್ಥಿತರಿದ್ದರು.


ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...