Homeಕರ್ನಾಟಕಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಶೃಂಗೇರಿಯಲ್ಲಿ ಅಶಾಂತಿ ಸೃಸ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಮತ್ತು ಸಂಗಡಿಗರನ್ನು ಬಂಧಿಸಿ: ಎಸ್‌ಡಿಪಿಐ

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಪಕ್ಷವು ಖಂಡಿಸಿದೆ.

- Advertisement -
- Advertisement -

ಶೃಂಗೇರಿಯಲ್ಲಿ ಶಂಕರಾಚಾರ್ಯ ಗೋಪುರದ ಮೇಲೆ ಬಾವುಟವನ್ನು ಹಾಕಿದ್ದನ್ನು ಎಸ್ಡಿಪಿಐ ಪಕ್ಷದ ಹಾಗೂ ಸ್ಥಳೀಯ ಮುಸ್ಲಿಂ ಸಮುದಾಯದ ತಲೆಗೆ ಕಟ್ಟಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಮಾಜಿ ಶಾಸಕ ಜೀವರಾಜ್ ಹಾಗೂ ಸಂಗಡಿಗರ ಮೇಲೆ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಸಮಿತಿ ಆಗ್ರಹಿಸಿದೆ.

ಘಟನೆಯನ್ನು ಅತ್ಯಂತ ಕಳವಳಕಾರಿಯೂ ಗಂಭೀರವೂ ಆಗಿದೆ ಎಂದಿರುವ ಪಕ್ಷವು ಇದು ಸಮಾಜದಲ್ಲಿ ಮುಸ್ಲಿಮರ ಬಗ್ಗೆ ದ್ವೇಷ ಹುಟ್ಟಿಸುವ ಉದ್ದೇಶಪೂರ್ವಕ ಕೃತ್ಯವಾಗಿದೆ ಹಾಗೂ ಕೋಮು ಸೌಹಾರ್ದತೆಯನ್ನು ಕೆಡಿಸಿ ಸಮಾಜದ ಶಾಂತಿ ಹಾಗೂ ನೆಮ್ಮದಿ ಕೆಡಿಸುವ ಷಡ್ಯಂತ್ರವೂ ಆಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಕೃತ್ಯ ಎಸಗಿದ ಮಿಲಿಂದ್ ಮೇಲೆ ಇನ್ನೂ ಎಫ್‌ಐಆರ್‌ ದಾಖಲಿಸದೆ ಇರುವುದನ್ನು ಉಲ್ಲೇಖಿಸಿದ ಪಕ್ಷವು, “ಅವರ ಮೇಲೆ ಸ್ವಯಂ ಪ್ರಕರಣ ದಾಖಲಿಸಬೇಕಾದ ಪ್ರಕರಣ ಇದಾಗಿದ್ದರೂ ಪೋಲೀಸರಿಂದ ಇನ್ನೂ ದೂರು ದಾಖಲಾಗಿಲ್ಲ. ಮುಸ್ಲಿಮರು ಕೂಡಾ ದೂರು ದಾಖಲು ಮಾಡಿದ್ದರು ಈವರೆಗೂ ಪೋಲೀಸರು ಎಫ್ಐಆರ್ ದಾಖಲಿಸಲಿಲ್ಲ. ಪೋಲೀಸರಿಗೆ ಧಮಕಿ ಹಾಕಿದ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸದ ಜೀವರಾಜ್ ಹಾಗೂ ಆತನ ಸಂಗಡಿಗರ ಮೇಲೆ ದೂರು ದಾಖಲಿಸಿದರೂ ಪೊಲೀಸರು ಎಫ್ಐಆರ್ ಮಾಡಿಲ್ಲ. ಇದು ಅತ್ಯಂತ ಅನ್ಯಾಯವಾಗಿದೆಯಲ್ಲದೆ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಲ್ಲಿ ಅಭದ್ರತೆಯನ್ನು ಹಾಗೂ ಪ್ರಶ್ನೆಯನ್ನು ಹುಟ್ಟುಹಾಕಿದೆ” ಎಂದು ಹೇಳಿದೆ.

“ಪೊಲೀಸರು ಸ್ಥಳೀಯ ಮೂವರು ಮುಸ್ಲಿಂ ಯುವಕರ ಮೇಲೆ ಎಫ್ಐಆರ್ ದಾಖಲಿಸಿ ಅಂದು ರಾತ್ರಿ ಇಡೀ ಠಾಣೆಯಲ್ಲಿ ಕೂಡಿಹಾಕಿದ್ದರು. ಆ ಬಾವುಟವು ಎಸ್ಡಿಪಿಐ ಪಕ್ಷದ್ದಾಗಿರಲಿಲ್ಲ. ಅದು ಶೃಂಗೇರಿಯ ಮಸೀದಿಯಲ್ಲಿ ಕಟ್ಟಿದ ಬಾವುಟವಾಗಿತ್ತು. ಮಸೀದಿಯ ಸಿಸಿಟಿವಿಯನ್ನು ಪರಿಶೀಲಿಸಿದಾಗ ಮನೋಹರ್ ಯಾನೆ ಮಿಲಿಂದ್ ಎಂಬಾತನು ಮಾಡಿದ್ದು ಕಂಡು ಬಂತು. ಒಂದು ವೇಳೆ ಮಸೀದಿಯಲ್ಲಿ ಸಿಸಿಟಿವಿ ಇಲ್ಲದಿದ್ದಲ್ಲಿ ಆ ಕೃತ್ಯ ಮುಸ್ಲಿಂ ಹುಡುಗರು ಮಾಡಿದ್ದೆಂದು ಮತ್ತು ಅದರಿಂದ ಶೃಂಗೇರಿಯಲ್ಲಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇತ್ತು.” ಎಂದು ಪಕ್ಷ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯಲ್ಲಿ ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಸಂಚು ಹೂಡಿದ ಮಿಲಿಂದ್, ಜೀವರಾಜ್ ಮತ್ತು ಅವರ ಸಂಗಡಿಗರ ಮೇಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆಗೆ ಅಡ್ಡಿಯಾಗಿರುವುದು ಏನು ಎನ್ನುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದ ಪಕ್ಷವು ಮಿಲಿಂದ್, ಜೀವರಾಜ್ ಮತ್ತು ಸಂಗಡಿಗರ ಮೇಲೆ ಕೂಡಲೇ ಎಫ್ಐಆರ್ ದಾಖಲಿಸಬೇಕು ಹಾಗೂ ಅವರನ್ನು ಬಂಧಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲೆತ್ನಿಸಿದ ಅವರ ಸಂಚನ್ನು ಹಾಗೂ ಅವರ ಹಿಂದಿರುವ ಶಕ್ತಿಯನ್ನು ಪೊಲೀಸರು ಬಯಲಿಗೆಳೆಯಬೇಕೆಂದು ಕೋರಿದೆ.

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಝ್ಮತ್ ಪಾಷಾ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸಿಕಂದರ್ ಪಾಷಾ ಉಪಸ್ಥಿತರಿದ್ದರು.


ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...