Homeಮುಖಪುಟಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

- Advertisement -
- Advertisement -

ಡ್ರೈವರ್ ಇದ್ರೀಶ್ ಪಾಶಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ ಎಂದು ತೀವ್ರ ಒತ್ತಡ ಕೇಳಿ ಬಂದಿದೆ. ಕೊಲೆ ನಡೆದು ನಾಲ್ಕು ದಿನಗಳಾದರೂ ಬಂಧಿಸದೇ ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಬಹುತ್ವ ಕರ್ನಾಟಕ ಮತ್ತು ಕಾಂಗ್ರೆಸ್ ಪಕ್ಷ ಪ್ರಶ್ನಿಸಿವೆ.

ಇದ್ರೀಶ್ ಪಾಶಾ ಕೊಲೆ ಪರಿಸ್ಥಿತಿಗೆ ಕಾರಣವಾದ ಕರ್ನಾಟಕ ಪೊಲೀಸ್ ಮತ್ತು ಕರ್ನಾಟಕ ಸರ್ಕಾರದ ನಿಷ್ಕ್ರಿಯತೆಯನ್ನು ನಾವು ಖಂಡಿಸುತ್ತೇವೆ! ಗೋ ರಕ್ಷಣೆಗೆ ಸಂಬಂಧಿಸಿದ ತೆಹಸೀನ್ ಪೂನಾವಾಲಾ ಪುಕರಣದಲ್ಲಿ ಕರ್ನಾಟಕ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು. ಪುನೀತ್ ಕೆರೆಹಳ್ಳಿ, ಬಹಿರಂಗವಾಗಿ ವಿಡಿಯೋ ಹೇಳಿಕೆಗಳನ್ನು ನೀಡುತ್ತಿದ್ದರೂ ಇನ್ನೂ ಯಾಕೆ ಬಂಧಿಸಿಲ್ಲ? ಅವನನ್ನು ರಕ್ಷಿಸುವವರು ಯಾರು? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಪುನೀತ್ ಕೆರೆಹಳ್ಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಬಜರಂಗದಳ, ರಾಷ್ಟ್ರ ರಕ್ಷಣಾ ವೇದಿಕೆ ಮತ್ತು ಇತರರು ಕಾನೂನನ್ನು ಕೈಗೆ ತೆಗೆದುಕೊಂಡಿರುವುದರ ಕುರಿತು ಹಾಲಿ ಹೈ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಬಹಳ ಮುಖ್ಯವಾಗಿ, ಪೋಲೀಸರ ನಿಷ್ಕ್ರಿಯತೆ ಗಮನಿಸಬೇಕು. ರಾಜ್ಯ ಸರ್ಕಾರದ ನಿಷ್ಕ್ರಿಯತೆಯೇ ಈ ಪರಿಸ್ಥಿತಿಗೆ ಕಾರಣವಾಗಿರುವುದರಿಂದ, ಲಿಂಚಿಂಗ್‌ನ ಎಲ್ಲಾ ಸಂತ್ರಸ್ತರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ದ್ವೇಷಪೂರಿತ ಅಪರಾಧಗಳನ್ನು ಅಂತ್ಯಗೊಳಿಸಲು ತಡೆಗಟ್ಟುವ, ಪರಿಹಾರ ಮತ್ತು ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ತೆಪ್ಪಿನ್ ಪೂನಾವಾಲಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ [AIR 2018 SC 3354] ನಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಅದರಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕಟ್ಟುನಿಟ್ಟಾದ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ವಿಳಂಬವಿಲ್ಲದೆ ಎಫ್‌ಐಆರ್ ನೋಂದಣಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಕಿರುಕುಳವನ್ನು ತಡೆಯುವುದು, ಗುಂಪು ಹಿಂಸಾಚಾರದ ಪ್ರಕರಣಗಳನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ವಿಚಾರಣೆಗೆ ಒಳಗಾಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ಬಂಧಿಸುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಬೇಕು ಮತ್ತು ತರಾತುರಿಯಲ್ಲಿ ಹೊರತಂದಿರುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಕರ್ನಾಟಕ ಪ್ರಿವೆನೈನ್ ಆಫ್ ಸ್ಲಾಟರ್ ಅಂಡ್ ಪ್ರಿಸರ್ವೇಶನ್ ಆಫ್ ಕ್ಯಾಟಲ್ ಕಾಯಿದೆ 2021 ಯನ್ನು ಹಿಂಪಡೆಯಿರಿ ಎಂದು ಒತ್ತಾಯಿಸಲಾಗಿದೆ.

ಏನಂಥ ಹೇಡಿತನ ಸರಕಾರವೇ ನಿನ್ನದು? ತಲೆ ಹಿಡುಕ, ಕೊಲೆ ಗಡುಕ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರರವರೆ ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ನನ್ನ ಕ್ಷೇತ್ರ ವ್ಯಾಪ್ತಿಯ ಸಾತನೂರಿನಲ್ಲಿ ಮತೀಯ ಗೂಂಡಾಗಿರಿಯ ಭಾಗವಾಗಿ ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರ ಆಪ್ತನಾಗಿದ್ದಾನೆ. ಈ ಹತ್ಯೆಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಹೊಣೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

‘‘ಈ ಕೊಲೆಗೆ ಸರ್ಕಾರವೇ ಕಾರಣ. ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ‌ಸರ್ಕಾರ ಕೂಡಲೇ  25 ಲಕ್ಷ ರೂ ಪರಿಹಾರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸೋಮವಾರ ರಾತ್ರಿ ಮತ್ತೆ ಫೇಸ್‌ಬುಕ್‌ ಲೈವ್ ಬಂದು ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕೊಲೆ ಮಾಡಿಸಿರಬೇಕು ಎಂದು ಧಮಕಿ ಹಾಕಿದ್ದಾನೆ. ಈ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...