Homeಮುಖಪುಟಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

- Advertisement -
- Advertisement -

ಡ್ರೈವರ್ ಇದ್ರೀಶ್ ಪಾಶಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ ಎಂದು ತೀವ್ರ ಒತ್ತಡ ಕೇಳಿ ಬಂದಿದೆ. ಕೊಲೆ ನಡೆದು ನಾಲ್ಕು ದಿನಗಳಾದರೂ ಬಂಧಿಸದೇ ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಬಹುತ್ವ ಕರ್ನಾಟಕ ಮತ್ತು ಕಾಂಗ್ರೆಸ್ ಪಕ್ಷ ಪ್ರಶ್ನಿಸಿವೆ.

ಇದ್ರೀಶ್ ಪಾಶಾ ಕೊಲೆ ಪರಿಸ್ಥಿತಿಗೆ ಕಾರಣವಾದ ಕರ್ನಾಟಕ ಪೊಲೀಸ್ ಮತ್ತು ಕರ್ನಾಟಕ ಸರ್ಕಾರದ ನಿಷ್ಕ್ರಿಯತೆಯನ್ನು ನಾವು ಖಂಡಿಸುತ್ತೇವೆ! ಗೋ ರಕ್ಷಣೆಗೆ ಸಂಬಂಧಿಸಿದ ತೆಹಸೀನ್ ಪೂನಾವಾಲಾ ಪುಕರಣದಲ್ಲಿ ಕರ್ನಾಟಕ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು. ಪುನೀತ್ ಕೆರೆಹಳ್ಳಿ, ಬಹಿರಂಗವಾಗಿ ವಿಡಿಯೋ ಹೇಳಿಕೆಗಳನ್ನು ನೀಡುತ್ತಿದ್ದರೂ ಇನ್ನೂ ಯಾಕೆ ಬಂಧಿಸಿಲ್ಲ? ಅವನನ್ನು ರಕ್ಷಿಸುವವರು ಯಾರು? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಪುನೀತ್ ಕೆರೆಹಳ್ಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಬಜರಂಗದಳ, ರಾಷ್ಟ್ರ ರಕ್ಷಣಾ ವೇದಿಕೆ ಮತ್ತು ಇತರರು ಕಾನೂನನ್ನು ಕೈಗೆ ತೆಗೆದುಕೊಂಡಿರುವುದರ ಕುರಿತು ಹಾಲಿ ಹೈ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಬಹಳ ಮುಖ್ಯವಾಗಿ, ಪೋಲೀಸರ ನಿಷ್ಕ್ರಿಯತೆ ಗಮನಿಸಬೇಕು. ರಾಜ್ಯ ಸರ್ಕಾರದ ನಿಷ್ಕ್ರಿಯತೆಯೇ ಈ ಪರಿಸ್ಥಿತಿಗೆ ಕಾರಣವಾಗಿರುವುದರಿಂದ, ಲಿಂಚಿಂಗ್‌ನ ಎಲ್ಲಾ ಸಂತ್ರಸ್ತರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ದ್ವೇಷಪೂರಿತ ಅಪರಾಧಗಳನ್ನು ಅಂತ್ಯಗೊಳಿಸಲು ತಡೆಗಟ್ಟುವ, ಪರಿಹಾರ ಮತ್ತು ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ತೆಪ್ಪಿನ್ ಪೂನಾವಾಲಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ [AIR 2018 SC 3354] ನಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಅದರಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕಟ್ಟುನಿಟ್ಟಾದ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ವಿಳಂಬವಿಲ್ಲದೆ ಎಫ್‌ಐಆರ್ ನೋಂದಣಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಕಿರುಕುಳವನ್ನು ತಡೆಯುವುದು, ಗುಂಪು ಹಿಂಸಾಚಾರದ ಪ್ರಕರಣಗಳನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ವಿಚಾರಣೆಗೆ ಒಳಗಾಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ಬಂಧಿಸುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಬೇಕು ಮತ್ತು ತರಾತುರಿಯಲ್ಲಿ ಹೊರತಂದಿರುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಕರ್ನಾಟಕ ಪ್ರಿವೆನೈನ್ ಆಫ್ ಸ್ಲಾಟರ್ ಅಂಡ್ ಪ್ರಿಸರ್ವೇಶನ್ ಆಫ್ ಕ್ಯಾಟಲ್ ಕಾಯಿದೆ 2021 ಯನ್ನು ಹಿಂಪಡೆಯಿರಿ ಎಂದು ಒತ್ತಾಯಿಸಲಾಗಿದೆ.

ಏನಂಥ ಹೇಡಿತನ ಸರಕಾರವೇ ನಿನ್ನದು? ತಲೆ ಹಿಡುಕ, ಕೊಲೆ ಗಡುಕ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರರವರೆ ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ನನ್ನ ಕ್ಷೇತ್ರ ವ್ಯಾಪ್ತಿಯ ಸಾತನೂರಿನಲ್ಲಿ ಮತೀಯ ಗೂಂಡಾಗಿರಿಯ ಭಾಗವಾಗಿ ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರ ಆಪ್ತನಾಗಿದ್ದಾನೆ. ಈ ಹತ್ಯೆಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಹೊಣೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

‘‘ಈ ಕೊಲೆಗೆ ಸರ್ಕಾರವೇ ಕಾರಣ. ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ‌ಸರ್ಕಾರ ಕೂಡಲೇ  25 ಲಕ್ಷ ರೂ ಪರಿಹಾರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸೋಮವಾರ ರಾತ್ರಿ ಮತ್ತೆ ಫೇಸ್‌ಬುಕ್‌ ಲೈವ್ ಬಂದು ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕೊಲೆ ಮಾಡಿಸಿರಬೇಕು ಎಂದು ಧಮಕಿ ಹಾಕಿದ್ದಾನೆ. ಈ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...