Homeಮುಖಪುಟ'ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ಹೇಡಿ ಮುಖ್ಯಮಂತ್ರಿಯ ನೇತೃತ್ವದ ಬಿಹಾರ ಸರ್ಕಾರವು ರೈತರ ಪರ ಧ್ವನಿ ಎತ್ತಿದ್ದಕ್ಕಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ನಮ್ಮನ್ನು ಬಂಧಿಸಿ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಅನುಮತಿಯಿಲ್ಲದೆ ಪ್ರತಿಭಟಿಸಿದ್ದಕ್ಕಾಗಿ ಬಿಹಾರದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಮತ್ತು ಮಹಾಘಟಬಂಧನ್‌ನ ಇತರ 18 ನಾಯಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ತೇಜಸ್ವಿ ಯಾದವ್ ’ತಾಕತ್ತಿದ್ದರೆ ಬಂಧಿಸಿ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ತಮ್ಮ ಮೇಲೆ ದಾಖಲಾದ ಪ್ರಕರಣದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ’ಹೇಡಿ’ ಎಂದು ಕರೆದಿದ್ದಾರೆ.

“ಹೇಡಿ ಮುಖ್ಯಮಂತ್ರಿಯ ನೇತೃತ್ವದ ಬಿಹಾರ ಸರ್ಕಾರವು ರೈತರ ಪರ ಧ್ವನಿ ಎತ್ತಿದ್ದಕ್ಕಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ನಮ್ಮನ್ನು ಬಂಧಿಸಿ. ನೀವು ಮಾಡದಿದ್ದರೆ ನಾನು ನಾನೇ ಶರಣಾಗುತ್ತೇನೆ. ನಾನು ರೈತರಿಗಾಗಿ ಗಲ್ಲಿಗೇರಲು ಸಿದ್ಧವಾಗಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ 

ಕಳೆದ 10 ದಿನಗಳಿಂದ ಕಠಿಣ ಶೀತದಲ್ಲಿ ದೆಹಲಿಯ ಗಡಿಯುದ್ದಕ್ಕೂ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಬೆಂಬಲಿಸಿದ್ದಕ್ಕಾಗಿ ತೇಜಸ್ವಿ ಯಾದವ್ ಮೇಲೆ “ಸುಳ್ಳು ನೆಪಗಳನ್ನು” ಬಳಸಿ ಕೇಸು ದಾಖಲಿಸಲಾಗಿದೆ ಎಂದು ಅವರ ಪಕ್ಷ ಆರ್‌ಜೆಡಿ ಕೂಡಾ ಎನ್‌ಡಿಎ ಸರ್ಕಾರವನ್ನು ಟೀಕಿಸಿದೆ.

“ಬಿಹಾರ ಸರ್ಕಾರವು ರೈತರ ಪರ ನಿಂತು ಪ್ರತಿಭಟಿಸಿದ್ದಕ್ಕಾಗಿ ತೇಜಸ್ವಿ ಯಾದವ್ ಅವರ ಮೇಲೆ ಪ್ರಕರಣ ದಾಖಲು ಮಾಡಿದೆ. ಈ ಮೂಲಕ ಬಿಹಾರ ಸರ್ಕಾರವು ಸುಳ್ಳು ಮತ್ತು ಕುಂಟು ನೆಪಗಳನ್ನು ಬಳಸಿ ದ್ವಿಮುಖವನ್ನು ತೋರಿಸಿದೆ. ರೈತರಿಗಾಗಿ ಅಂತಹ ಸಾವಿರ ಎಫ್‌ಐಆರ್‌ಗಳಿಗೆ ನಾವು ಹೆದರುವುದಿಲ್ಲ” ಎಂದು ಪಕ್ಷ ಘೋಷಿಸಿದೆ.

ಇದಕ್ಕೂ ಮುನ್ನ ಆರ್‌ಜೆಡಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಚಿತ್ರವೊಂದನ್ನು ಟ್ವೀಟ್ ಮಾಡಿದ್ದು, ಅಲ್ಲಿ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗಿಲ್ಲ ಎಂದಿದೆ.

ಇದನ್ನೂ ಓದಿ:  ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

ಆ ಸಭೆಯಲ್ಲಿ ಆರೋಗ್ಯ ಸಚಿವ ಮಂಗಲ್ ಪಾಂಡೆ ಸೇರಿದಂತೆ ಇತರರು ಭಾಗವಹಿಸಿದ್ದರು ಎಂಬುದನ್ನು ಎತ್ತಿ ತೋರಿಸಿದ ಪಕ್ಷವು, “ಆಡಳಿತಾರೂಡ ಸಮ್ಮಿಶ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಪ್ರತಿಭಟನೆಗೆ ಅನುಮತಿ ನೀಡಲಿಲ್ಲ, ಆದರೆ ಅವರ ಸಭೆಗಳಲ್ಲಿ ಯಾವುದೇ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಿಲ್ಲ” ಎಂದು ಟೀಕಿಸಿದೆ.

ಶನಿವಾರ ಬಿಹಾರ ಸರ್ಕಾರ ಪ್ರತಿಭಟನೆ ನಡೆಸಲು ಅನುಮತಿ ನೀಡದಿದ್ದರೂ, ಪ್ರತಿಪಕ್ಷಗಳು ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಿದವು. ಅಲ್ಲಿ ಅವರು “ದೇಶಾದ್ಯಂತದ ರೈತರ ಹಿತಾಸಕ್ತಿಯನ್ನು ಕಾಪಾಡಲು ಯಾವುದೇ ಬೆಲೆ ತೆರಲು ಸಿದ್ದ” ಎಂದು ಪ್ರಮಾಣವಚನ ಸ್ವೀಕರಿಸಿದರು.

ತೇಜಸ್ವಿ ಯಾದವ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಿಸೆಂಬರ್ 8 ರಂದು ನಡೆಯುವ ಅಖಿಲ ಭಾರತ ಮುಷ್ಕರಕ್ಕೂ ಬೆಂಬಲ ಘೋಷಿಸಿದ್ದಾರೆ. ಅನುಮತಿ ಪಡೆಯದೆ ಸಭೆ ನಡೆಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ 500 ಅಪರಿಚಿತ ವ್ಯಕ್ತಿಗಳೂ ಸೇರಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...