Homeರಾಜಕೀಯ‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

- Advertisement -
- Advertisement -

ಪಕ್ಷ ಅಥವಾ ಅದರ ಯಾವುದೇ ನಾಯಕರನ್ನು ಹೆಸರಿಸದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ಸಮನ್ಸ್ ಕಳುಹಿಸುವ ಬದಲು ಧೈರ್ಯವಿದ್ದರೆ ಬಂಧಿಸುವಂತೆ ಸವಾಲು ಎಸೆದಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮ್ಮ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅವರು ಇಂದು ರಾಜ್ಯದಲ್ಲಿ ಇರುವ ನಿರ್ದೇಶನಾಲಯಲ್ಲಿ ಹಾಜರಾಗಬೇಕಿತ್ತು. ಅದರ ಬದಲಾಗಿ ಮುಖ್ಯಮಂತ್ರಿ ಸೋರೆನ್ ಅವರು ರಾಂಚಿಯ ಕಾಂಕೆ ರಸ್ತೆ ಪ್ರದೇಶದಲ್ಲಿ ತಮ್ಮ ಅಧಿಕೃತ ನಿವಾಸದ ಹೊರಗೆ ಮಧ್ಯಾಹ್ನ 2.30 ರ ನಂತರ ನೂರಾರು ಬೆಂಬಲಿಗರ ನಡುವೆ ಮಾತನಾತ್ತಾ ಬಿಜೆಪಿಗೆ ಸವಾಲೆಸೆದಿದ್ದಾರೆ. ನಂತರ ಅವರು ಬುಡಕಟ್ಟು ಜನಾಂಗದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢಕ್ಕೆ ತೆರಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಆದಿವಾಸಿ ನೃತ್ಯ ಮಹೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಲಾಗಿತ್ತು. ಅದೇ ದಿನ ನಿರ್ದೇಶನಾಲಯ ಅವರನ್ನು ಕರೆಸಿರುವುದು ‘ಪಿತೂರಿ’ ಎಂದು ಸೋರೆನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

“ನಾನು ಯಾರನ್ನಾದರೂ ಕೊಲೆ ಮಾಡಿದ್ದೇನೆಯೇ? ನಾನೇನು ಅಪರಾಧ ಮಾಡಿದ್ದೇನೆ? ಒಂದು ವೇಳೆ ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಿ ತೋರಿಸಿ. ಸಮನ್ಸ್ ಏಕೆ ಕಳುಹಿಸಬೇಕು? ನಮ್ಮ ಸರ್ಕಾರವು ರಾಜ್ಯಕ್ಕಾಗಿ ಪೂರ್ಣ ಶಕ್ತಿಯಿಂದ ಕೆಲಸ ಮಾಡುತ್ತಿದೆ. ಒಂದು ವೇಳೆ ಆದಿವಾಸಿಗಳು ಬಂದರೆ ವಿಪಕ್ಷಗಳಿಗೆ ತಲೆಮರೆಸಿಕೊಳ್ಳಲು ಜಾಗ ಸಿಗುವುದಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.‘

‘‘ಆದಿವಾಸಿಗಳು ಮತ್ತು ಮೂಲ ನಿವಾಸಿಗಳು ಯಶಸ್ವಿಯಾಗುವುದನ್ನು ಬಯಸದ ‘ಹೊರಗಿನ ಗ್ಯಾಂಗ್’ ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದು, ಅವರೆಲ್ಲರನ್ನೂ ತಾವು ಗುರುತಿಸಿದ್ದು, ಅವರಿಗೆ ‘‘ತಕ್ಕ ಉತ್ತರ’’ ನೀಡುತ್ತಿದ್ದೇನೆ ಎಂದು ಸೊರೆನ್ ಹೇಳಿದ್ದಾರೆ.

ವಿಚಾರಣೆಯ ಹೆಸರಿನಲ್ಲಿ ನಾವು ಇಲ್ಲಿ ಸರ್ಕಾರ ರಚಿಸುತ್ತಿದ್ದೇವೆ ಎಂಬ ಸಂದೇಶವನ್ನು ಅವರು (ಬಿಜೆಪಿ) ನೀಡಲು ಬಯಸುತ್ತಿದ್ದಾರೆ. ಆದರೆ ಈ ಹಿಂದೆ ನಡೆದ ನಾಲ್ಕು ಉಪಚುನಾವಣೆಯಲ್ಲಿ ನಾಲ್ಕರಲ್ಲೂ ಅವರು ಸೋತಿದ್ದಾರೆ ಎಂದು ಸೊರೆನ್ ನೆನಪಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ ಜನತೆಯಿಂದ ಉತ್ತರ ಸಿಗಲಿದೆ ಎಂದು ಹೇಳಿದ ಅವರು, “ಜಾರ್ಖಂಡ್ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ‘ಸರ್ಕಾರ್ ಆಪ್ಕೆ ದ್ವಾರ’ದಿಂದಾಗಿ ಬಿಜೆಪಿಯು ‘ಹೆದರಿರುವ ಮೋಡ್’ನಲ್ಲಿದೆ” ಎಂದು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...