Homeರಾಜಕೀಯ‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

- Advertisement -
- Advertisement -

ಪಕ್ಷ ಅಥವಾ ಅದರ ಯಾವುದೇ ನಾಯಕರನ್ನು ಹೆಸರಿಸದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ಸಮನ್ಸ್ ಕಳುಹಿಸುವ ಬದಲು ಧೈರ್ಯವಿದ್ದರೆ ಬಂಧಿಸುವಂತೆ ಸವಾಲು ಎಸೆದಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮ್ಮ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅವರು ಇಂದು ರಾಜ್ಯದಲ್ಲಿ ಇರುವ ನಿರ್ದೇಶನಾಲಯಲ್ಲಿ ಹಾಜರಾಗಬೇಕಿತ್ತು. ಅದರ ಬದಲಾಗಿ ಮುಖ್ಯಮಂತ್ರಿ ಸೋರೆನ್ ಅವರು ರಾಂಚಿಯ ಕಾಂಕೆ ರಸ್ತೆ ಪ್ರದೇಶದಲ್ಲಿ ತಮ್ಮ ಅಧಿಕೃತ ನಿವಾಸದ ಹೊರಗೆ ಮಧ್ಯಾಹ್ನ 2.30 ರ ನಂತರ ನೂರಾರು ಬೆಂಬಲಿಗರ ನಡುವೆ ಮಾತನಾತ್ತಾ ಬಿಜೆಪಿಗೆ ಸವಾಲೆಸೆದಿದ್ದಾರೆ. ನಂತರ ಅವರು ಬುಡಕಟ್ಟು ಜನಾಂಗದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢಕ್ಕೆ ತೆರಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಆದಿವಾಸಿ ನೃತ್ಯ ಮಹೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಲಾಗಿತ್ತು. ಅದೇ ದಿನ ನಿರ್ದೇಶನಾಲಯ ಅವರನ್ನು ಕರೆಸಿರುವುದು ‘ಪಿತೂರಿ’ ಎಂದು ಸೋರೆನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

“ನಾನು ಯಾರನ್ನಾದರೂ ಕೊಲೆ ಮಾಡಿದ್ದೇನೆಯೇ? ನಾನೇನು ಅಪರಾಧ ಮಾಡಿದ್ದೇನೆ? ಒಂದು ವೇಳೆ ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಿ ತೋರಿಸಿ. ಸಮನ್ಸ್ ಏಕೆ ಕಳುಹಿಸಬೇಕು? ನಮ್ಮ ಸರ್ಕಾರವು ರಾಜ್ಯಕ್ಕಾಗಿ ಪೂರ್ಣ ಶಕ್ತಿಯಿಂದ ಕೆಲಸ ಮಾಡುತ್ತಿದೆ. ಒಂದು ವೇಳೆ ಆದಿವಾಸಿಗಳು ಬಂದರೆ ವಿಪಕ್ಷಗಳಿಗೆ ತಲೆಮರೆಸಿಕೊಳ್ಳಲು ಜಾಗ ಸಿಗುವುದಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.‘

‘‘ಆದಿವಾಸಿಗಳು ಮತ್ತು ಮೂಲ ನಿವಾಸಿಗಳು ಯಶಸ್ವಿಯಾಗುವುದನ್ನು ಬಯಸದ ‘ಹೊರಗಿನ ಗ್ಯಾಂಗ್’ ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದು, ಅವರೆಲ್ಲರನ್ನೂ ತಾವು ಗುರುತಿಸಿದ್ದು, ಅವರಿಗೆ ‘‘ತಕ್ಕ ಉತ್ತರ’’ ನೀಡುತ್ತಿದ್ದೇನೆ ಎಂದು ಸೊರೆನ್ ಹೇಳಿದ್ದಾರೆ.

ವಿಚಾರಣೆಯ ಹೆಸರಿನಲ್ಲಿ ನಾವು ಇಲ್ಲಿ ಸರ್ಕಾರ ರಚಿಸುತ್ತಿದ್ದೇವೆ ಎಂಬ ಸಂದೇಶವನ್ನು ಅವರು (ಬಿಜೆಪಿ) ನೀಡಲು ಬಯಸುತ್ತಿದ್ದಾರೆ. ಆದರೆ ಈ ಹಿಂದೆ ನಡೆದ ನಾಲ್ಕು ಉಪಚುನಾವಣೆಯಲ್ಲಿ ನಾಲ್ಕರಲ್ಲೂ ಅವರು ಸೋತಿದ್ದಾರೆ ಎಂದು ಸೊರೆನ್ ನೆನಪಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ ಜನತೆಯಿಂದ ಉತ್ತರ ಸಿಗಲಿದೆ ಎಂದು ಹೇಳಿದ ಅವರು, “ಜಾರ್ಖಂಡ್ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ‘ಸರ್ಕಾರ್ ಆಪ್ಕೆ ದ್ವಾರ’ದಿಂದಾಗಿ ಬಿಜೆಪಿಯು ‘ಹೆದರಿರುವ ಮೋಡ್’ನಲ್ಲಿದೆ” ಎಂದು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...