Homeರಾಜಕೀಯ‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

- Advertisement -
- Advertisement -

ಪಕ್ಷ ಅಥವಾ ಅದರ ಯಾವುದೇ ನಾಯಕರನ್ನು ಹೆಸರಿಸದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ಸಮನ್ಸ್ ಕಳುಹಿಸುವ ಬದಲು ಧೈರ್ಯವಿದ್ದರೆ ಬಂಧಿಸುವಂತೆ ಸವಾಲು ಎಸೆದಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮ್ಮ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅವರು ಇಂದು ರಾಜ್ಯದಲ್ಲಿ ಇರುವ ನಿರ್ದೇಶನಾಲಯಲ್ಲಿ ಹಾಜರಾಗಬೇಕಿತ್ತು. ಅದರ ಬದಲಾಗಿ ಮುಖ್ಯಮಂತ್ರಿ ಸೋರೆನ್ ಅವರು ರಾಂಚಿಯ ಕಾಂಕೆ ರಸ್ತೆ ಪ್ರದೇಶದಲ್ಲಿ ತಮ್ಮ ಅಧಿಕೃತ ನಿವಾಸದ ಹೊರಗೆ ಮಧ್ಯಾಹ್ನ 2.30 ರ ನಂತರ ನೂರಾರು ಬೆಂಬಲಿಗರ ನಡುವೆ ಮಾತನಾತ್ತಾ ಬಿಜೆಪಿಗೆ ಸವಾಲೆಸೆದಿದ್ದಾರೆ. ನಂತರ ಅವರು ಬುಡಕಟ್ಟು ಜನಾಂಗದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢಕ್ಕೆ ತೆರಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಆದಿವಾಸಿ ನೃತ್ಯ ಮಹೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಲಾಗಿತ್ತು. ಅದೇ ದಿನ ನಿರ್ದೇಶನಾಲಯ ಅವರನ್ನು ಕರೆಸಿರುವುದು ‘ಪಿತೂರಿ’ ಎಂದು ಸೋರೆನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

“ನಾನು ಯಾರನ್ನಾದರೂ ಕೊಲೆ ಮಾಡಿದ್ದೇನೆಯೇ? ನಾನೇನು ಅಪರಾಧ ಮಾಡಿದ್ದೇನೆ? ಒಂದು ವೇಳೆ ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಿ ತೋರಿಸಿ. ಸಮನ್ಸ್ ಏಕೆ ಕಳುಹಿಸಬೇಕು? ನಮ್ಮ ಸರ್ಕಾರವು ರಾಜ್ಯಕ್ಕಾಗಿ ಪೂರ್ಣ ಶಕ್ತಿಯಿಂದ ಕೆಲಸ ಮಾಡುತ್ತಿದೆ. ಒಂದು ವೇಳೆ ಆದಿವಾಸಿಗಳು ಬಂದರೆ ವಿಪಕ್ಷಗಳಿಗೆ ತಲೆಮರೆಸಿಕೊಳ್ಳಲು ಜಾಗ ಸಿಗುವುದಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.‘

‘‘ಆದಿವಾಸಿಗಳು ಮತ್ತು ಮೂಲ ನಿವಾಸಿಗಳು ಯಶಸ್ವಿಯಾಗುವುದನ್ನು ಬಯಸದ ‘ಹೊರಗಿನ ಗ್ಯಾಂಗ್’ ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದು, ಅವರೆಲ್ಲರನ್ನೂ ತಾವು ಗುರುತಿಸಿದ್ದು, ಅವರಿಗೆ ‘‘ತಕ್ಕ ಉತ್ತರ’’ ನೀಡುತ್ತಿದ್ದೇನೆ ಎಂದು ಸೊರೆನ್ ಹೇಳಿದ್ದಾರೆ.

ವಿಚಾರಣೆಯ ಹೆಸರಿನಲ್ಲಿ ನಾವು ಇಲ್ಲಿ ಸರ್ಕಾರ ರಚಿಸುತ್ತಿದ್ದೇವೆ ಎಂಬ ಸಂದೇಶವನ್ನು ಅವರು (ಬಿಜೆಪಿ) ನೀಡಲು ಬಯಸುತ್ತಿದ್ದಾರೆ. ಆದರೆ ಈ ಹಿಂದೆ ನಡೆದ ನಾಲ್ಕು ಉಪಚುನಾವಣೆಯಲ್ಲಿ ನಾಲ್ಕರಲ್ಲೂ ಅವರು ಸೋತಿದ್ದಾರೆ ಎಂದು ಸೊರೆನ್ ನೆನಪಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ ಜನತೆಯಿಂದ ಉತ್ತರ ಸಿಗಲಿದೆ ಎಂದು ಹೇಳಿದ ಅವರು, “ಜಾರ್ಖಂಡ್ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ‘ಸರ್ಕಾರ್ ಆಪ್ಕೆ ದ್ವಾರ’ದಿಂದಾಗಿ ಬಿಜೆಪಿಯು ‘ಹೆದರಿರುವ ಮೋಡ್’ನಲ್ಲಿದೆ” ಎಂದು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...