Homeಮುಖಪುಟಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

ಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

- Advertisement -
- Advertisement -

ಭಾರತದ ಮಾನವ ಹಕ್ಕುಗಳ ಆತಂಕಕಾರಿ ಪರಿಸ್ಥಿತಿ ಈಗಾಗಲೇ ಜಗತ್ತಿನ ಮುಂದೆ ಬಯಲಾಗಿರುವಂಥದ್ದು. ಒಂದೆಡೆ ತೀವ್ರ ಬಲಪಂಥೀಯ ದುಷ್ಕರ್ಮಿಗಳಿಂದ ದಲಿತರು, ಅಲ್ಪಸಂಖ್ಯಾತರು ಮತ್ತು ಇನ್ನಿತರ ತಳಸಮುದಾಯಗಳ ಜನರು ಹಲ್ಲೆಗೀಡಾಗುತ್ತಿದ್ದರೆ ಮತ್ತೊಂದೆಡೆ ಪ್ರಭುತ್ವ ಮತ್ತು ನ್ಯಾಯಾಂಗಗಳೂ ಕೂಡಾ ಮಾನವ ಹಕ್ಕುಗಳ ಹರಣಕ್ಕೆ ಕಾರಣವಾಗುತ್ತಿರುವ ದುರಂತಮಯ ಸನ್ನಿವೇಶ ನಮ್ಮೆದುರಿಗಿದೆ. ಭೀಮಾ ಕೋರೆಗಾಂವ್ ಕಾರ್ಯಕ್ರಮ ನಡೆಸಿದ ಕಾರಣಕ್ಕೆ ಹಲವು ನ್ಯಾಯವಾದಿಗಳೂ ಸೇರಿದಂತೆ ಹಿರಿಯ ಸಾಮಾಜಿಕ ಕಾರ್ಯಕರ್ತರನ್ನು ಒಂದೆಡೆ ಬಂಧಿಸಿ ವರ್ಷಗಟ್ಟಲೆ ಜೈಲಿನಲ್ಲಿರಿಸಲಾಗಿದ್ದರೆ, ರಾಜದ್ರೋಹದ ಪ್ರಕರಣದಡಿ ಅನಗತ್ಯವಾದ ಆರೋಪಗಳನ್ನು ಹೊರಿಸಿ ಬಂಧಿಸಲಾಗಿರುವ ಸಾಹಿತಿಗಳು, ಬುದ್ಧಿಜೀವಿಗಳು, ಹೋರಾಟಗಾರರ ಪಟ್ಟಿಯಲ್ಲಿ ಅತ್ಯಂತ ಹಿರಿಯ ವಯಸ್ಸಿನ ಕವಿ, ಹೋರಾಟಗಾರ ವರವರರಾವ್ ಅವರಿಂದ ಹಿಡಿದು (ಈಚೆಗಷ್ಟೇ ಅನಾರೋಗ್ಯದ ಕಾರಣಕ್ಕೆ ಇವರಿಗೆ 6 ತಿಂಗಳ ಜಾಮೀನನ್ನು ನೀಡಲಾಗಿದೆ) ಭಾರತದ ಅತ್ಯಂತ ಪ್ರಖರ ಚಿಂತಕ, ದಲಿತ ಲೇಖಕರಲ್ಲೊಬ್ಬರಾದ ಆನಂದ್ ತೇಲ್ತುಂಬ್ಡೆಯವರ ತನಕ ಎಲ್ಲರನ್ನೂ ಇಂದು ಸರಳುಗಳ ಹಿಂದಿರಿಸಲಾಗಿರುವುದು ಈ ದೇಶದ ಪ್ರಜಾತಂತ್ರದ ದುಸ್ಥಿತಿಗೆ ಸಾಕ್ಷಿಯಾಗಿದೆ.

ಮೊದಲಿಗೂ ಮತ್ತು ಈಗಲೂ ಈ ಪಟ್ಟಿಯಲ್ಲಿ ಹಲವು ಮಹಿಳೆಯರ ಹೆಸರುಗಳೂ ಸೇರಿವೆ. ಭೀಮಾ ಕೋರೆಗಾಂವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಶೋಮಾ ಸೆನ್, ನ್ಯಾಯವಾದಿ ಸುಧಾ ಭಾರದ್ವಾಜ್ ಮುಂತಾದವರ ಬಂಧನವಾಗಿ ವರ್ಷಗಳೇ ಕಳೆದವು. ನಾಗರಿಕತ್ವ ತಿದ್ದುಪಡಿ ಕಾಯ್ದೆಯ ಕರಾಳತೆಯ ವಿರುದ್ಧ ದನಿಯೆತ್ತಿದವರು ಕೇಂದ್ರ ಸರ್ಕಾರ ಮತ್ತು ಗೃಹ ಇಲಾಖೆಗಳ ತದನಂತರದ ಬಲಿಪಶುಗಳಾದರೆ, ಇದೀಗ ರೈತ ಹೋರಾಟಗಾರರು ಮತ್ತವರ ಬೆಂಬಲಿಗರ ಸರದಿ.

ಸುಪ್ರಿಯಾ ಶರ್ಮ

ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆಯ ವಾರ್ಷಿಕ ವರದಿಯ ಪ್ರಕಾರ, 2020-21ರ ನಡುವಿನ ಮಾನವ ಹಕ್ಕುಗಳ ಉಲ್ಲಂಘನೆಯು 2020ರ ವರ್ಷದ ಆರಂಭದಿಂದಲೇ ಶುರುವಾಯಿತು. ಸಿಎಎ ವಿರೋಧಿ ಹೋರಾಟವನ್ನು ಅಮಾನ್ಯಗೊಳಿಸಲು ದೆಹಲಿಯಲ್ಲಿ ಸಂಘಪರಿವಾರ ಪ್ರೇರಿತವಾದ ಗಲಭೆಗಳಲ್ಲಿ ಸುಮಾರು 53 ಜನರು ಸತ್ತು ಅಪಾರ ಆಸ್ತಿಪಾಸ್ತಿ ನಷ್ಟವಾಯಿತು. ಅದಕ್ಕಿಂತ ಗಂಭೀರವಾದ ಸಂಗತಿಯೆಂದರೆ ಆ ಗಲಭೆಯನ್ನು ಸೃಷ್ಟಿಸಿದ ಆರೋಪದಲ್ಲಿ ಹಲವು ತಿಂಗಳುಗಳ ಕಾಲ ಬಂಧನಗಳು ಮತ್ತು ಬಂಧನದ ಭಯಾತಂಕಗಳನ್ನು ಹುಟ್ಟಿಸುವ ಕೆಲಸಗಳು ರಾಜಧಾನಿಯಲ್ಲಿ ಮತ್ತು ಇತರ ಹಲವು ನಗರಗಳಲ್ಲಿ ನಡೆದವು. ಸುಪ್ರಿಯಾ ಶರ್ಮ, ಸಂಗೀತಾ ಬರೂಹಾ, ರಾಣಾ ಅಯೂಬ್ ಮುಂತಾದ ಪತ್ರಕರ್ತೆಯರನ್ನೂ ಒಳಗೊಂಡು ಹಲವರನ್ನು ಆರೋಪಿಸಲಾಯಿತು.

ಕೋವಿಡ್‌ನ ಸಂದರ್ಭದಲ್ಲೂ ಕೂಡಾ ಹಲವು ಬಗೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದವೆಂದು ಹ್ಯೂಮನ್ ರೈಟ್ಸ್ ವಾಚ್‌ನ ದಕ್ಷಿಣ ಏಷ್ಯಾದ ನಿರ್ದೇಶಕಿ ಮೀನಾಕ್ಷಿ ಗಂಗೂಲಿ ಉಲ್ಲೇಖಿಸುತ್ತಾರೆ. ಹಾಗೆಯೇ ಜಮ್ಮು ಕಾಶ್ಮೀರದ ವಿಶೇಷಾಧಿಕಾರ ಕಾಯ್ದೆಯನ್ನು ತೆಗೆದುಹಾಕಲಾದ ಸಂದರ್ಭದಲ್ಲೂ ಸಾರ್ವಜನಿಕ ಭದ್ರತಾ ಕಾಯ್ದೆಯ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ನಡೆದ ಕಾನೂನು ಉಲ್ಲಂಘನೆಗಳ ದೊಡ್ಡಪಟ್ಟಿಯನ್ನೇ ನೀಡುತ್ತಾರೆ. ರಾಜಕೀಯ ಪ್ರೇರಿತ ಹಲ್ಲೆಗಳು, ಗೃಹಬಂಧನಗಳಿಂದ ಹಿಡಿದು ಇಂಟರ್ನೆಟ್ ಕಡಿತದ ತನಕ ಇದು ವಿಸ್ತರಿಸುತ್ತದೆ.

ಸಂಗೀತಾ ಬರೂಹಾ

ಈಚೆಗಷ್ಟೇ ಬಂಧನಕ್ಕೊಳಗಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಂಗಳೂರಿನ 21 ವರ್ಷದ ಪ್ರಕೃತಿ ಪ್ರೇಮಿ, ಸಾಮಾಜಿಕ ಕಳಕಳಿಯ ಪರಿಸರ ಕಾರ್ಯಕರ್ತೆ, ವಿದ್ಯಾರ್ಥಿನಿ ದಿಶಾ ರವಿಯ ಪ್ರಕರಣ ಈ ಎಲ್ಲದಕ್ಕೆ ಒಂದು ಜ್ವಲಂತ ನಿದರ್ಶನವಾಗಿದ್ದರೆ ಹರ್ಯಾಣದ ದಲಿತ ಸಾಮಾಜಿಕ ಕಾರ್ಯಕರ್ತೆ ನೌದೀಪ್ ಕೌರ್ ಪ್ರಕರಣ ಈ ಬಂಧನದ ಸರಣಿಗಳು ರಾಜಕೀಯ ಪ್ರೇರಿತ ಎಂಬುದನ್ನು ಸಾಬೀತುಗೊಳಿಸುತ್ತಿವೆ. ದಿಶಾ ರವಿ ಪ್ರಕರಣದಲ್ಲಿ ಆಕೆಯ ಜಾಮೀನು ಮತ್ತು ಸುರಕ್ಷತೆಯ ಮನವಿಗಳನ್ನೂ ಪುರಸ್ಕರಿಸದೆ, ಈ ಹಿಂದೆಂದೂ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಿಲ್ಲದ ಸರಳವಾದ ವಿದ್ಯಾರ್ಥಿನಿಯೊಬ್ಬಳನ್ನು ನ್ಯಾಯಾಂಗ ಬಂಧನಕ್ಕೂ ನೀಡದೆ ಪೊಲೀಸ್ ಕಸ್ಟಡಿಗೆ ನೀಡಿದ್ದು ಅತ್ಯಂತ ಆಘಾತಕಾರಿಯಾಗಿತ್ತು. ಆಕೆಯ ಮೇಲೆ ಹೊರಿಸಲಾದ ಆರೋಪಗಳನ್ನು ನೋಡಿದರೆ, ಯೋಗ, ಚಹಾ ಮತ್ತು ಸರ್ಕಾರದ ರೈತವಿರೋಧಿ ನೀತಿಗಳನ್ನು ವಿಡಂಬನಾತ್ಮಕವಾಗಿ ಬಳಸಿ ಜಾಲತಾಣಗಳಲ್ಲಿ ಆಕೆ ಮಾಡಿದ ಕಮೆಂಟ್‌ಗಳೇ ದೇಶದ ಭದ್ರತೆಗೆ ಈಗಿರುವ ಅತಿದೊಡ್ಡ ಅಪಾಯವೆಂಬಂತೆ ಸರ್ಕಾರ ಬಿಂಬಿಸಲು ನೋಡುತ್ತಿದೆ.

ನೌದೀಪ್ ಕೌರ್

ಇಡೀ ವಿಶ್ವಕ್ಕೆ ಗೊತ್ತಿರುವ ಗ್ರೇಟ್ ಥನ್‌ಬರ್ಗ್ ಅವರ ಟೂಲ್‌ಕಿಟ್ ಟ್ವೀಟನ್ನು ಸರ್ಕಾರದ ವಿರುದ್ಧದ ಷಡ್ಯಂತ್ರ ಎಂಬ ಮಟ್ಟಕ್ಕೆ ಮೋದಿ ಸರ್ಕಾರ ತೆಗೆದುಕೊಂಡು ಹೋಗುತ್ತದೆಂದರೆ ಯಾವ ಮಟ್ಟದ ಫ್ಯಾಸಿಸ್ಟ್ ಪ್ರವೃತ್ತಿ ಆಡಳಿತದಲ್ಲಿ ಬೆಳೆದಿದೆಯೆಂಬುದು ತಿಳಿಯುತ್ತದೆ. ಹಾಗೆಯೇ ನೌದೀಪ್ ಎಂಬ ಹರ್ಯಾಣದ ಕುಂಡಲಿಯ ಯುವತಿಯ ಬಂಧನದ ಪ್ರಕರಣವೂ ಕೂಡಾ. ಅಲ್ಲಿನ ದಲಿತ ಮತ್ತು ಕಾರ್ಮಿಕರ ಸಮುದಾಯವನ್ನು ಸಂಘಟಿಸುತ್ತಾ, ಅದರೊಂದಿಗೆ ರೈತ ಆಂದೋಲನವನ್ನು ಬೆಸೆಯಲೆಂದು ಕೆಲಸ ಮಾಡುತ್ತಿದ್ದ ಸಂಘಟನೆಯ ನೌದೀಪ್ ಕೌರ್‌ರನ್ನು ಜನವರಿ ತಿಂಗಳ 12ರಂದು ಬಿಜೆಪಿ ಆಡಳಿತದಲ್ಲಿರುವ ಹರ್ಯಾಣದ ಪೊಲೀಸರು ಬಂಧಿಸಿದ್ದರು. ಆಕೆಯ ಮೇಲೆ ರಾಜದ್ರೋಹ, ದೇಶದ ಭದ್ರತೆಗೆ ಧಕ್ಕೆಯಂತಹವನ್ನೂ ಒಳಗೊಂಡು ಹೊರಿಸಲಾಗಿರುವ ಹಲವು ಆರೋಪಗಳ ಗಹನತೆಗೂ ಆಕೆಯ ಸಾಮಾಜಿಕ ಕೆಲಸಗಳ ಹಿನ್ನೆಲೆಗೂ ಅರ್ಥಾತ್ ಸಂಬಂಧವಿಲ್ಲ. ಇದನ್ನೇ ಆಕೆಯ ತಾಯಿ ಮತ್ತು ಮಗಳ ಹೋರಾಟಕ್ಕೆ ಸದಾ ಬೆಂಗಾವಲಾಗಿ ನಿಂತಿರುವ ಸಬರ್‌ಜೀತ್ ಕೌರ್ ಅವರೂ ಕೂಡಾ ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇಷ್ಟಾಗಿಯೂ ಆಕೆಗೆ ಜಾಮೀನು ದೊರೆಯಲು ಹೆಚ್ಚೂ ಕಡಿಮೆ ಎರಡು ತಿಂಗಳ ಸಮಯ ಬೇಕಾಯಿತು. ರೈತ ಆಂದೋಲನದ ವಾಸ್ತವಗಳನ್ನು ಬಿಚ್ಚಿಟ್ಟ ಪತ್ರಕರ್ತರ ಬಂಧನಗಳನ್ನೂ ನಾವು ನೋಡುತ್ತಿದ್ದೇವೆ.

ರಾಣಾ ಅಯೂಬ್

ಇದೇ ಸಂದರ್ಭದಲ್ಲಿ, ಇವೆಲ್ಲ ಬಂಧನಗಳ ಕಥೆಗಳಾದರೆ, ಬಂಧನಕ್ಕೊಳಗಾಗದೆ ರಾಜಾರೋಶವಾಗಿ ತಿರುಗಾಡುತ್ತಿರುವವರ ಇನ್ನೊಂದು ಮಗ್ಗುಲಿನ ಹಲವು ಕಥೆಗಳಿವೆ. ನಿಜಕ್ಕೂ ಕಾನೂನು ಉಲ್ಲಂಘನೆಯ ಕೆಲಸ ಮಾಡಿದ, ರೈತ ಆಂದೊಲನದಲ್ಲಿರಲಿ, ಸಿಎಎ ಹೋರಾಟದ ಸಂದರ್ಭದ ಗಲಭೆಯಲ್ಲಿರಲಿ ವಿಡಿಯೋ ಸಾಕ್ಷಾಧಾರಗಳ ಸಮೇತ ಕಂಡಿರುವ ಸಂಘಪರಿವಾರದ ಗೂಂಡಾಗಳು, ಜನಪ್ರತಿನಿಧಿಗಳು, ಅವರ ಬೆಂಬಲಿಗರ ಮೇಲೆ ಬಂಧನವಿರಲಿ ಒಂದು ಪ್ರಕರಣ ಕೂಡಾ ದಾಖಲಾಗಿಲ್ಲ ಎಂಬುದು ಆತಂಕದ ವಿಚಾರವಲ್ಲವೇ?
ಒಟ್ಟಿನಲ್ಲಿ ಬಂಧನಗಳ ವರಸೆಯಲ್ಲಿ ಸಾಮಾಜಿಕ ಕಾರ್ಯಕರ್ತೆರು, ಪತ್ರಕರ್ತೆಯರನ್ನೂ ಮೊದಲುಗೊಂಡು ಅನೇಕ ಮಹಿಳೆಯರನ್ನೂ ಬಲಿಪಶುವಾಗಿಸಲು ನೋಡುತ್ತಿರುವ ಸರ್ಕಾರದ ಇಂತಹ ಪ್ರಯತ್ನಗಳಿಗೆ ಈ ಎಲ್ಲ ದಿಟ್ಟ ಮಹಿಳೆಯರು ಗಟ್ಟಿಯಾಗಿ ಎದುರು ನಿಂತಿರುವುದು ಮತ್ತು ದಿಶಾ ರವಿ ಪ್ರಕರಣದಲ್ಲಿ ಮತ್ತು ಪ್ರಿಯಾ ರಮಣಿಯವರ ಪ್ರಕರಣಗಳಲ್ಲಿ ನ್ಯಾಯಾಧೀಶರು ವ್ಯಕ್ತಪಡಿಸಿರುವ ಸ್ಪಷ್ಟವಾದ ಅನಿಸಿಕೆಗಳ ಹಾಗೆ ಅವರನ್ನು ಬೆಂಬಲಿಸುವ ದನಿಗಳೂ ಸಹಾ ಕೇಳಿಬರುತ್ತಿರುವುದು ಸಮಾಧಾನದ ಸಂಗತಿ.

ಮಲ್ಲಿಗೆ

ಮಲ್ಲಿಗೆ
ಸಾಮಾಜಿಕ ಕಾರ್ಯಕರ್ತೆ, ಕರ್ನಾಟಕ ಜನಶಕ್ತಿಯ ಸಕ್ರಿಯ ಸದಸ್ಯರು


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...