Homeಮುಖಪುಟಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

ಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

- Advertisement -
- Advertisement -

ಭಾರತದ ಮಾನವ ಹಕ್ಕುಗಳ ಆತಂಕಕಾರಿ ಪರಿಸ್ಥಿತಿ ಈಗಾಗಲೇ ಜಗತ್ತಿನ ಮುಂದೆ ಬಯಲಾಗಿರುವಂಥದ್ದು. ಒಂದೆಡೆ ತೀವ್ರ ಬಲಪಂಥೀಯ ದುಷ್ಕರ್ಮಿಗಳಿಂದ ದಲಿತರು, ಅಲ್ಪಸಂಖ್ಯಾತರು ಮತ್ತು ಇನ್ನಿತರ ತಳಸಮುದಾಯಗಳ ಜನರು ಹಲ್ಲೆಗೀಡಾಗುತ್ತಿದ್ದರೆ ಮತ್ತೊಂದೆಡೆ ಪ್ರಭುತ್ವ ಮತ್ತು ನ್ಯಾಯಾಂಗಗಳೂ ಕೂಡಾ ಮಾನವ ಹಕ್ಕುಗಳ ಹರಣಕ್ಕೆ ಕಾರಣವಾಗುತ್ತಿರುವ ದುರಂತಮಯ ಸನ್ನಿವೇಶ ನಮ್ಮೆದುರಿಗಿದೆ. ಭೀಮಾ ಕೋರೆಗಾಂವ್ ಕಾರ್ಯಕ್ರಮ ನಡೆಸಿದ ಕಾರಣಕ್ಕೆ ಹಲವು ನ್ಯಾಯವಾದಿಗಳೂ ಸೇರಿದಂತೆ ಹಿರಿಯ ಸಾಮಾಜಿಕ ಕಾರ್ಯಕರ್ತರನ್ನು ಒಂದೆಡೆ ಬಂಧಿಸಿ ವರ್ಷಗಟ್ಟಲೆ ಜೈಲಿನಲ್ಲಿರಿಸಲಾಗಿದ್ದರೆ, ರಾಜದ್ರೋಹದ ಪ್ರಕರಣದಡಿ ಅನಗತ್ಯವಾದ ಆರೋಪಗಳನ್ನು ಹೊರಿಸಿ ಬಂಧಿಸಲಾಗಿರುವ ಸಾಹಿತಿಗಳು, ಬುದ್ಧಿಜೀವಿಗಳು, ಹೋರಾಟಗಾರರ ಪಟ್ಟಿಯಲ್ಲಿ ಅತ್ಯಂತ ಹಿರಿಯ ವಯಸ್ಸಿನ ಕವಿ, ಹೋರಾಟಗಾರ ವರವರರಾವ್ ಅವರಿಂದ ಹಿಡಿದು (ಈಚೆಗಷ್ಟೇ ಅನಾರೋಗ್ಯದ ಕಾರಣಕ್ಕೆ ಇವರಿಗೆ 6 ತಿಂಗಳ ಜಾಮೀನನ್ನು ನೀಡಲಾಗಿದೆ) ಭಾರತದ ಅತ್ಯಂತ ಪ್ರಖರ ಚಿಂತಕ, ದಲಿತ ಲೇಖಕರಲ್ಲೊಬ್ಬರಾದ ಆನಂದ್ ತೇಲ್ತುಂಬ್ಡೆಯವರ ತನಕ ಎಲ್ಲರನ್ನೂ ಇಂದು ಸರಳುಗಳ ಹಿಂದಿರಿಸಲಾಗಿರುವುದು ಈ ದೇಶದ ಪ್ರಜಾತಂತ್ರದ ದುಸ್ಥಿತಿಗೆ ಸಾಕ್ಷಿಯಾಗಿದೆ.

ಮೊದಲಿಗೂ ಮತ್ತು ಈಗಲೂ ಈ ಪಟ್ಟಿಯಲ್ಲಿ ಹಲವು ಮಹಿಳೆಯರ ಹೆಸರುಗಳೂ ಸೇರಿವೆ. ಭೀಮಾ ಕೋರೆಗಾಂವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಶೋಮಾ ಸೆನ್, ನ್ಯಾಯವಾದಿ ಸುಧಾ ಭಾರದ್ವಾಜ್ ಮುಂತಾದವರ ಬಂಧನವಾಗಿ ವರ್ಷಗಳೇ ಕಳೆದವು. ನಾಗರಿಕತ್ವ ತಿದ್ದುಪಡಿ ಕಾಯ್ದೆಯ ಕರಾಳತೆಯ ವಿರುದ್ಧ ದನಿಯೆತ್ತಿದವರು ಕೇಂದ್ರ ಸರ್ಕಾರ ಮತ್ತು ಗೃಹ ಇಲಾಖೆಗಳ ತದನಂತರದ ಬಲಿಪಶುಗಳಾದರೆ, ಇದೀಗ ರೈತ ಹೋರಾಟಗಾರರು ಮತ್ತವರ ಬೆಂಬಲಿಗರ ಸರದಿ.

ಸುಪ್ರಿಯಾ ಶರ್ಮ

ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆಯ ವಾರ್ಷಿಕ ವರದಿಯ ಪ್ರಕಾರ, 2020-21ರ ನಡುವಿನ ಮಾನವ ಹಕ್ಕುಗಳ ಉಲ್ಲಂಘನೆಯು 2020ರ ವರ್ಷದ ಆರಂಭದಿಂದಲೇ ಶುರುವಾಯಿತು. ಸಿಎಎ ವಿರೋಧಿ ಹೋರಾಟವನ್ನು ಅಮಾನ್ಯಗೊಳಿಸಲು ದೆಹಲಿಯಲ್ಲಿ ಸಂಘಪರಿವಾರ ಪ್ರೇರಿತವಾದ ಗಲಭೆಗಳಲ್ಲಿ ಸುಮಾರು 53 ಜನರು ಸತ್ತು ಅಪಾರ ಆಸ್ತಿಪಾಸ್ತಿ ನಷ್ಟವಾಯಿತು. ಅದಕ್ಕಿಂತ ಗಂಭೀರವಾದ ಸಂಗತಿಯೆಂದರೆ ಆ ಗಲಭೆಯನ್ನು ಸೃಷ್ಟಿಸಿದ ಆರೋಪದಲ್ಲಿ ಹಲವು ತಿಂಗಳುಗಳ ಕಾಲ ಬಂಧನಗಳು ಮತ್ತು ಬಂಧನದ ಭಯಾತಂಕಗಳನ್ನು ಹುಟ್ಟಿಸುವ ಕೆಲಸಗಳು ರಾಜಧಾನಿಯಲ್ಲಿ ಮತ್ತು ಇತರ ಹಲವು ನಗರಗಳಲ್ಲಿ ನಡೆದವು. ಸುಪ್ರಿಯಾ ಶರ್ಮ, ಸಂಗೀತಾ ಬರೂಹಾ, ರಾಣಾ ಅಯೂಬ್ ಮುಂತಾದ ಪತ್ರಕರ್ತೆಯರನ್ನೂ ಒಳಗೊಂಡು ಹಲವರನ್ನು ಆರೋಪಿಸಲಾಯಿತು.

ಕೋವಿಡ್‌ನ ಸಂದರ್ಭದಲ್ಲೂ ಕೂಡಾ ಹಲವು ಬಗೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದವೆಂದು ಹ್ಯೂಮನ್ ರೈಟ್ಸ್ ವಾಚ್‌ನ ದಕ್ಷಿಣ ಏಷ್ಯಾದ ನಿರ್ದೇಶಕಿ ಮೀನಾಕ್ಷಿ ಗಂಗೂಲಿ ಉಲ್ಲೇಖಿಸುತ್ತಾರೆ. ಹಾಗೆಯೇ ಜಮ್ಮು ಕಾಶ್ಮೀರದ ವಿಶೇಷಾಧಿಕಾರ ಕಾಯ್ದೆಯನ್ನು ತೆಗೆದುಹಾಕಲಾದ ಸಂದರ್ಭದಲ್ಲೂ ಸಾರ್ವಜನಿಕ ಭದ್ರತಾ ಕಾಯ್ದೆಯ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ನಡೆದ ಕಾನೂನು ಉಲ್ಲಂಘನೆಗಳ ದೊಡ್ಡಪಟ್ಟಿಯನ್ನೇ ನೀಡುತ್ತಾರೆ. ರಾಜಕೀಯ ಪ್ರೇರಿತ ಹಲ್ಲೆಗಳು, ಗೃಹಬಂಧನಗಳಿಂದ ಹಿಡಿದು ಇಂಟರ್ನೆಟ್ ಕಡಿತದ ತನಕ ಇದು ವಿಸ್ತರಿಸುತ್ತದೆ.

ಸಂಗೀತಾ ಬರೂಹಾ

ಈಚೆಗಷ್ಟೇ ಬಂಧನಕ್ಕೊಳಗಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಂಗಳೂರಿನ 21 ವರ್ಷದ ಪ್ರಕೃತಿ ಪ್ರೇಮಿ, ಸಾಮಾಜಿಕ ಕಳಕಳಿಯ ಪರಿಸರ ಕಾರ್ಯಕರ್ತೆ, ವಿದ್ಯಾರ್ಥಿನಿ ದಿಶಾ ರವಿಯ ಪ್ರಕರಣ ಈ ಎಲ್ಲದಕ್ಕೆ ಒಂದು ಜ್ವಲಂತ ನಿದರ್ಶನವಾಗಿದ್ದರೆ ಹರ್ಯಾಣದ ದಲಿತ ಸಾಮಾಜಿಕ ಕಾರ್ಯಕರ್ತೆ ನೌದೀಪ್ ಕೌರ್ ಪ್ರಕರಣ ಈ ಬಂಧನದ ಸರಣಿಗಳು ರಾಜಕೀಯ ಪ್ರೇರಿತ ಎಂಬುದನ್ನು ಸಾಬೀತುಗೊಳಿಸುತ್ತಿವೆ. ದಿಶಾ ರವಿ ಪ್ರಕರಣದಲ್ಲಿ ಆಕೆಯ ಜಾಮೀನು ಮತ್ತು ಸುರಕ್ಷತೆಯ ಮನವಿಗಳನ್ನೂ ಪುರಸ್ಕರಿಸದೆ, ಈ ಹಿಂದೆಂದೂ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಿಲ್ಲದ ಸರಳವಾದ ವಿದ್ಯಾರ್ಥಿನಿಯೊಬ್ಬಳನ್ನು ನ್ಯಾಯಾಂಗ ಬಂಧನಕ್ಕೂ ನೀಡದೆ ಪೊಲೀಸ್ ಕಸ್ಟಡಿಗೆ ನೀಡಿದ್ದು ಅತ್ಯಂತ ಆಘಾತಕಾರಿಯಾಗಿತ್ತು. ಆಕೆಯ ಮೇಲೆ ಹೊರಿಸಲಾದ ಆರೋಪಗಳನ್ನು ನೋಡಿದರೆ, ಯೋಗ, ಚಹಾ ಮತ್ತು ಸರ್ಕಾರದ ರೈತವಿರೋಧಿ ನೀತಿಗಳನ್ನು ವಿಡಂಬನಾತ್ಮಕವಾಗಿ ಬಳಸಿ ಜಾಲತಾಣಗಳಲ್ಲಿ ಆಕೆ ಮಾಡಿದ ಕಮೆಂಟ್‌ಗಳೇ ದೇಶದ ಭದ್ರತೆಗೆ ಈಗಿರುವ ಅತಿದೊಡ್ಡ ಅಪಾಯವೆಂಬಂತೆ ಸರ್ಕಾರ ಬಿಂಬಿಸಲು ನೋಡುತ್ತಿದೆ.

ನೌದೀಪ್ ಕೌರ್

ಇಡೀ ವಿಶ್ವಕ್ಕೆ ಗೊತ್ತಿರುವ ಗ್ರೇಟ್ ಥನ್‌ಬರ್ಗ್ ಅವರ ಟೂಲ್‌ಕಿಟ್ ಟ್ವೀಟನ್ನು ಸರ್ಕಾರದ ವಿರುದ್ಧದ ಷಡ್ಯಂತ್ರ ಎಂಬ ಮಟ್ಟಕ್ಕೆ ಮೋದಿ ಸರ್ಕಾರ ತೆಗೆದುಕೊಂಡು ಹೋಗುತ್ತದೆಂದರೆ ಯಾವ ಮಟ್ಟದ ಫ್ಯಾಸಿಸ್ಟ್ ಪ್ರವೃತ್ತಿ ಆಡಳಿತದಲ್ಲಿ ಬೆಳೆದಿದೆಯೆಂಬುದು ತಿಳಿಯುತ್ತದೆ. ಹಾಗೆಯೇ ನೌದೀಪ್ ಎಂಬ ಹರ್ಯಾಣದ ಕುಂಡಲಿಯ ಯುವತಿಯ ಬಂಧನದ ಪ್ರಕರಣವೂ ಕೂಡಾ. ಅಲ್ಲಿನ ದಲಿತ ಮತ್ತು ಕಾರ್ಮಿಕರ ಸಮುದಾಯವನ್ನು ಸಂಘಟಿಸುತ್ತಾ, ಅದರೊಂದಿಗೆ ರೈತ ಆಂದೋಲನವನ್ನು ಬೆಸೆಯಲೆಂದು ಕೆಲಸ ಮಾಡುತ್ತಿದ್ದ ಸಂಘಟನೆಯ ನೌದೀಪ್ ಕೌರ್‌ರನ್ನು ಜನವರಿ ತಿಂಗಳ 12ರಂದು ಬಿಜೆಪಿ ಆಡಳಿತದಲ್ಲಿರುವ ಹರ್ಯಾಣದ ಪೊಲೀಸರು ಬಂಧಿಸಿದ್ದರು. ಆಕೆಯ ಮೇಲೆ ರಾಜದ್ರೋಹ, ದೇಶದ ಭದ್ರತೆಗೆ ಧಕ್ಕೆಯಂತಹವನ್ನೂ ಒಳಗೊಂಡು ಹೊರಿಸಲಾಗಿರುವ ಹಲವು ಆರೋಪಗಳ ಗಹನತೆಗೂ ಆಕೆಯ ಸಾಮಾಜಿಕ ಕೆಲಸಗಳ ಹಿನ್ನೆಲೆಗೂ ಅರ್ಥಾತ್ ಸಂಬಂಧವಿಲ್ಲ. ಇದನ್ನೇ ಆಕೆಯ ತಾಯಿ ಮತ್ತು ಮಗಳ ಹೋರಾಟಕ್ಕೆ ಸದಾ ಬೆಂಗಾವಲಾಗಿ ನಿಂತಿರುವ ಸಬರ್‌ಜೀತ್ ಕೌರ್ ಅವರೂ ಕೂಡಾ ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇಷ್ಟಾಗಿಯೂ ಆಕೆಗೆ ಜಾಮೀನು ದೊರೆಯಲು ಹೆಚ್ಚೂ ಕಡಿಮೆ ಎರಡು ತಿಂಗಳ ಸಮಯ ಬೇಕಾಯಿತು. ರೈತ ಆಂದೋಲನದ ವಾಸ್ತವಗಳನ್ನು ಬಿಚ್ಚಿಟ್ಟ ಪತ್ರಕರ್ತರ ಬಂಧನಗಳನ್ನೂ ನಾವು ನೋಡುತ್ತಿದ್ದೇವೆ.

ರಾಣಾ ಅಯೂಬ್

ಇದೇ ಸಂದರ್ಭದಲ್ಲಿ, ಇವೆಲ್ಲ ಬಂಧನಗಳ ಕಥೆಗಳಾದರೆ, ಬಂಧನಕ್ಕೊಳಗಾಗದೆ ರಾಜಾರೋಶವಾಗಿ ತಿರುಗಾಡುತ್ತಿರುವವರ ಇನ್ನೊಂದು ಮಗ್ಗುಲಿನ ಹಲವು ಕಥೆಗಳಿವೆ. ನಿಜಕ್ಕೂ ಕಾನೂನು ಉಲ್ಲಂಘನೆಯ ಕೆಲಸ ಮಾಡಿದ, ರೈತ ಆಂದೊಲನದಲ್ಲಿರಲಿ, ಸಿಎಎ ಹೋರಾಟದ ಸಂದರ್ಭದ ಗಲಭೆಯಲ್ಲಿರಲಿ ವಿಡಿಯೋ ಸಾಕ್ಷಾಧಾರಗಳ ಸಮೇತ ಕಂಡಿರುವ ಸಂಘಪರಿವಾರದ ಗೂಂಡಾಗಳು, ಜನಪ್ರತಿನಿಧಿಗಳು, ಅವರ ಬೆಂಬಲಿಗರ ಮೇಲೆ ಬಂಧನವಿರಲಿ ಒಂದು ಪ್ರಕರಣ ಕೂಡಾ ದಾಖಲಾಗಿಲ್ಲ ಎಂಬುದು ಆತಂಕದ ವಿಚಾರವಲ್ಲವೇ?
ಒಟ್ಟಿನಲ್ಲಿ ಬಂಧನಗಳ ವರಸೆಯಲ್ಲಿ ಸಾಮಾಜಿಕ ಕಾರ್ಯಕರ್ತೆರು, ಪತ್ರಕರ್ತೆಯರನ್ನೂ ಮೊದಲುಗೊಂಡು ಅನೇಕ ಮಹಿಳೆಯರನ್ನೂ ಬಲಿಪಶುವಾಗಿಸಲು ನೋಡುತ್ತಿರುವ ಸರ್ಕಾರದ ಇಂತಹ ಪ್ರಯತ್ನಗಳಿಗೆ ಈ ಎಲ್ಲ ದಿಟ್ಟ ಮಹಿಳೆಯರು ಗಟ್ಟಿಯಾಗಿ ಎದುರು ನಿಂತಿರುವುದು ಮತ್ತು ದಿಶಾ ರವಿ ಪ್ರಕರಣದಲ್ಲಿ ಮತ್ತು ಪ್ರಿಯಾ ರಮಣಿಯವರ ಪ್ರಕರಣಗಳಲ್ಲಿ ನ್ಯಾಯಾಧೀಶರು ವ್ಯಕ್ತಪಡಿಸಿರುವ ಸ್ಪಷ್ಟವಾದ ಅನಿಸಿಕೆಗಳ ಹಾಗೆ ಅವರನ್ನು ಬೆಂಬಲಿಸುವ ದನಿಗಳೂ ಸಹಾ ಕೇಳಿಬರುತ್ತಿರುವುದು ಸಮಾಧಾನದ ಸಂಗತಿ.

ಮಲ್ಲಿಗೆ

ಮಲ್ಲಿಗೆ
ಸಾಮಾಜಿಕ ಕಾರ್ಯಕರ್ತೆ, ಕರ್ನಾಟಕ ಜನಶಕ್ತಿಯ ಸಕ್ರಿಯ ಸದಸ್ಯರು


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...