Homeಮುಖಪುಟ10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ...

10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ?

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಎಂಫಿಲ್‌ ವಿದ್ಯಾರ್ಥಿನಿ ದೇವಂಗನಾ ಕಾಳಿತಾ ಅವರನ್ನು 10 ದಿನಗಳ ಅವಧಿಯಲ್ಲಿ ಮೂರನೇ ಬಾರಿಗೆ ಬಂಧಿಸಲಾಗಿದೆ. ಈ ಬಾರಿ ದೆಹಲಿ ಪೊಲೀಸ್ ಅಪರಾಧ ವಿಭಾಗವು ಆಕೆಯನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಈ ಹಿಂದೆ ಮೇ 23 ರಂದು ಜಾಫ್ರಾಬಾದ್ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ದೇವಂಗನಾ ಕಾಳಿತಾಳನ್ನು ಸಹ ವಿದ್ಯಾರ್ಥಿನಿ ನತಾಶಾ ನರ್ವಾಲ್ ಅವರೊಂದಿಗೆ ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಆದರೆ ನ್ಯಾಯಾಲಯ ಅವಳಿಗೆ ಜಾಮೀನು ನೀಡಿದ ನಂತರ, ಮೇ 28 ರಂದು ದೆಹಲಿ ಪೊಲೀಸರು ಮತ್ತೆ  ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ಬಂಧಿಸಿದರು. ಅವರ ಮೇಲೆ ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ (UAPA) ನರ್ವಾಲ್ ವಿರುದ್ಧವೂ ಆರೋಪ ಹೊರಿಸಲಾಗಿದೆ.

ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದ್ದರೆ, ನ್ಯಾಯಾಲಯವು ಎರಡು ಮಾತ್ರ ನೀಡಿತು. ಈಗ ಬಂಧನದ ಅವಧಿ ಮುಗಿದ ತಕ್ಷಣ, ಕಲಿತಾಳನ್ನು ಮೂರನೆಯ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ, ಅಥವಾ ನ್ಯಾಯಾಂಗ ಬಂಧನದಿಂದ ಸ್ಥಳಾಂತರಿಸಲಾಗಿದೆ. ಈ ಬಾರಿ ಅವಳ ಮೇಲೆ ಕಾನೂನುಬಾಹಿರ ಸಭೆ ಮತ್ತು ದರಿಯಾಗಂಜ್‌ನಲ್ಲಿ ಗಲಭೆ ಮಾಡಿದ ಆರೋಪ ಹೊರಿಸಲಾಗಿದೆ.

ಮೊದಲ ಪ್ರಕರಣದಲ್ಲಿ ಕಾಳಿತಾ ಮತ್ತು ನರ್ವಾಲ್ ಅವರಿಗೆ ಜಾಮೀನು ನೀಡಲಾಗಿದ್ದರೂ, ದೆಹಲಿ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳನ್ನು ‘ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವುದರಿಂದ’ ಅವರ ವಿರುದ್ಧ ವಿಚಾರಣೆಗೆ ಒಳಪಡಿಸಲಾಗಿದೆಯೆಂದು ಹೇಳಿದೆ.

“ಆರೋಪಿಗಳು ಸಮಾಜದಲ್ಲಿ ಬಲವಾದ ಬೇರುಗಳನ್ನು ಹೊಂದಿದ್ದಾರೆ ಮತ್ತು ಸುಶಿಕ್ಷಿತರು. ತನಿಖೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರೊಂದಿಗೆ ಸಹಕರಿಸಲು ಸಿದ್ಧರಾಗಿದ್ದಾರೆ ”ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫೆಬ್ರವರಿ 22 ಮತ್ತು 23 ರಂದು ಜಾಫ್ರಾಬಾದ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು. ಅದೇ ಸಮಯದಲ್ಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸಿಎಎ ವಿರೋಧಿ ಪ್ರತಿಭಟನೆಗಳನ್ನು ಪೊಲೀಸರು ನಿಲ್ಲಿಸದಿದ್ದರೆ ನಾವೇ ನಿಲ್ಲಿಸಬೇಕಾಗುತ್ತದೆ ಎಂದು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದರು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಅದರ ನಂತರ ಕೋಮು ಹಿಂಸಾಚಾರವು ದೊಡ್ಡ ಮಟ್ಟದಲ್ಲಿ ಭುಗಿಲೆದ್ದಿದ್ದು ಈಶಾನ್ಯ ದೆಹಲಿಯಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಪ್ರಚೋದಿಸಿದ ಕಾರಣಕ್ಕೆ ಕಪಿಲ್‌ ಮಿಶ್ರಾರನ್ನು ದೆಹಲಿ ಪೊಲೀಸರು ಇನ್ನೂ ಬಂಧಿಸಿಲ್ಲ ಅಥವಾ ಪ್ರಕರಣ ದಾಖಲಿಸಿಲ್ಲ ಏಕೆ” ಎಂದು ಪಿಂಜ್ರಾ ತೋಡ್‌ ಸಂಘಟನೆ ಪ್ರಶ್ನಿಸಿದೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು


“ಯುಎಪಿಎಯಂತಹ ಕಠಿಣ ಕಾನೂನುಗಳ ಬಳಕೆ ಮತ್ತು ಪ್ರಜಾಪ್ರಭುತ್ವವಾದಿ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ದಾಖಲಿಸಿ ಬಂಧಿಸುತ್ತಿರುವುದು ಅಧಿಕಾರದ ಸ್ಪಷ್ಟ ದುರುಪಯೋಗವಾಗಿದೆ. ದೇವಂಗನ ಮತ್ತು ನತಾಶಾ ಅವರ ಮೇಲಿನ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಪೊಲೀಸರು ಮತ್ತೆ ಮತ್ತೆ ಬಂಧಿಸುವ ತಂತ್ರವನ್ನು ನಾವು ಖಂಡಿಸುತ್ತೇವೆ” ಎಂದು ಪಿಂಜ್ರಾ ತೋಡ್ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ : CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...