Homeಮುಖಪುಟಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸೈನಿಕನ ಬಂಧನ

ಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸೈನಿಕನ ಬಂಧನ

- Advertisement -
- Advertisement -

ಪಾಕಿಸ್ತಾನದ ಏಜೆಂಟರಿಗೆ ಬೇಹುಗಾರಿಕೆ ಮತ್ತು ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ರಾಜಸ್ಥಾನ್ ಪೊಲೀಸರ ಗುಪ್ತಚರ ವಿಭಾಗವು 22 ವರ್ಷದ ಸೇನಾ ಸಿಬ್ಬಂದಿಯನ್ನು ಬಂಧಿಸಿದೆ. ಆರೋಪಿಯನ್ನು ಸಿಕಾರ್ ಜಿಲ್ಲೆಯ ಆಕಾಶ್ ಮೆಹ್ರಿಯಾ ಎಂದು ಗುರುತಿಸಲಾಗಿದ್ದು, ಪಾಕಿಸ್ತಾನದ ಮಹಿಳಾ ಏಜೆಂಟರಿಗೆ ಮಾಹಿತಿ ನೀಡುತ್ತಿದ್ದರು ಎಂದು ವರದಿಯಾಗಿದೆ.

ರಾಜಸ್ಥಾನದ ಪೊಲೀಸರ ಪ್ರಕಾರ, ಪಾಕಿಸ್ತಾನದ ಏಜೆಂಟರು ಫೇಸ್‌ಬುಕ್ ಮೂಲಕ ಆಕಾಶ್ ಅವರೊಂದಿಗೆ ಸ್ನೇಹ ಬೆಳೆಸಿದ್ದರು. ಸಿಕ್ಕಿಂನಲ್ಲಿ ಸೇವೆಯಲ್ಲಿದ್ದ ಆಕಾಶ್ ರಜಾ ದಿನಗಳನ್ನು ಕಳೆಯಲು ತನ್ನ ಊರಿಗೆ ತೆರಲಿದ್ದಾಗ ಜೈಪುರದಲ್ಲಿ ಬಂಧಿಸಿದ ಗುಪ್ತಚರ ವಿಭಾಗಗಳು ವಿಚಾರಣೆ ನಡೆಸಿವೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ರಾಜಸ್ಥಾನದ ಸಿಕಾರ್ ಜಿಲ್ಲೆಯ ಲಕ್ಷ್ಮನ್‌ಗರ್‌ ತಹಸಿಲ್ ಮೂಲದ ಸೇನಾ ಸಿಬ್ಬಂದಿಯಾದ ಆಕಾಶ್ ಅವರನ್ನು ರಾಜಸ್ಥಾನ ಸಿಐಡಿಯ ರಾಜ್ಯ ಘಟಕದ ವಿಶೇಷ ಶಾಖೆ ಬಂಧಿಸಿದೆ.

ಇಂಟರ್‌ರ್ನೆಟ್‌‌ನಲ್ಲಿ ನಕಲಿ ಗುರುತುಗಳ ಮೂಲಕ ಮೆಹ್ರಿಯಾರೊಂದಿಗೆ ಸಂಪರ್ಕ ಸಾಧಿಸಿದ್ದ ಪಾಕಿಸ್ತಾನಿ ಏಜೆಂಟರಿಗೆ, ಸೇನಾ ಕಾರ್ಯತಂತ್ರದ ಮಾಹಿತಿಯನ್ನು ಆಕಾಶ್ ಪೂರೈಸುತ್ತಿದ್ದರು ಎಂದು ಪೊಲೀಸರ ಗುಪ್ತಚರ ವಿಭಾಗ ಹೇಳಿದೆ.

ಫೇಸ್‌ಬುಕ್‌ನಲ್ಲಿ ಬಂದಿದ್ದ ಸೇಹಿತರ ಕೋರಿಕೆಯನ್ನು ಸ್ವೀಕರಿಸಿದ್ದ ಆಕಾಶ್, ತಮ್ಮ ಫೋನ್ ಮೂಲಕ ಸೈನ್ಯದ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಪೂರೈಸುತ್ತಿದ್ದರು. ಈ ಮೂಲಕ ಪಾಕಿಸ್ತಾನದ ಮಹಿಳಾ ಏಜೆಂಟರೊಂದಿಗೆ ಚಾಟ್‌ಗಳಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಶ್ ಸೆಪ್ಟೆಂಬರ್ 2018 ರಲ್ಲಿ ಭಾರತೀಯ ಸೇನೆಯಲ್ಲಿ ಸೇರಿದ್ದು, 2019 ರಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿದ್ದರು. ಅವರನ್ನು ಸಿಕ್ಕಿಂನಲ್ಲಿ ನೇಮಿಸಲಾಗಿತ್ತು.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....