Homeಮುಖಪುಟಶಾಸಕ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಬಂಧನ

ಶಾಸಕ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಬಂಧನ

- Advertisement -
- Advertisement -

ಚಿತ್ತಾಪುರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಎಂಬುವವರನ್ನು ಕಲಬುರಗಿ ನಗರದ ಬ್ರಹ್ಮಪುರ ಪೊಲೀಸರು ಹೈದರಾಬಾದ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

“ನಿಮ್ಮನ್ನು ಶೂಟ್ ಮಾಡಲು ನಾವು ರೆಡಿ ಇದ್ದೀವಿ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಇತ್ತೀಚೆಗೆ ಬೆದರಿಕೆ ಹಾಕಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ನೀವು ಎಕೆ-47ನಿಂದ ಶೂಟ್ ಮಾಡುವಿರಾ? ಅಥವಾ ತೋಪ್‌ನಿಂದ ಮಾಡೋದಿದೆಯಾ? ನೀವು ಶೂಟ್ ಮಾಡಿ, ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ” ಎನ್ನುವ ಮೂಲಕ ಬಂದೂಕಿನ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿದ್ದರು.

ಈ ಹೇಳಿಕೆಯನ್ನು ಖಂಡಿಸಿ ಆರೋಪಿಯನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸಹ ಆ ಬಿಜೆಪಿ ರೌಡಿಯನ್ನು ಬಂಧಿಸಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತಿಪ್ಪಣಪ್ಪ ಕುಮಕನೂರರವರು ಕಲಬುರಗಿಯ ಬ್ರಹ್ಮಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ದೂರಿನ ಮೇರೆಗೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ಧ ಪ್ರಕರಣ ದಾಖಲಾಗಿರುವುದು ತಿಳಿಯುತ್ತಲೇ ಆರೋಪಿ ಮಣಿಕಂಠ ರಾಠೋಡ್‌ ನಾಪತ್ತೆಯಾಗಿದ್ದರು. ಅವರ ಪತ್ತೆಯಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಹೈದರಾಬಾದ್‌ನಲ್ಲಿ ಅಡಗಿರುವ ಸುಳಿವು ಹಿನ್ನೆಲೆಯಲ್ಲಿ 5 ಜನರ ಪೊಲೀಸ್ ತಂಡ ಹೈದರಾಬಾದ್‌ಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ಪ್ರಿಯಾಂಕ್ ಖರ್ಗೆಯವರು “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶೂಟ್ ಬೆದರಿಕೆ ಹಾಕಲಾಗಿತ್ತು.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ಪ್ರಿಯಾಂಕ್ ಖರ್ಗೆಯವರು “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶೂಟ್ ಬೆದರಿಕೆ ಹಾಕಲಾಗಿತ್ತು.

ಇದನ್ನೂ ಓದಿ; ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...