Homeಮುಖಪುಟಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: 'ಅಧಿಕಾರದ ದುರುಪಯೋಗ' ಎಂದ ಹೈಕೋರ್ಟ್

ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕಿ,  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಂದಾ ಕೊಚ್ಚರ್‌ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿರುವುದು “ಅಧಿಕಾರದ ದುರುಪಯೋಗ” ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅನುಜಾ ಪ್ರಭುದೇಸಾಯಿ ಮತ್ತು ಎನ್ ಆರ್ ಬೋರ್ಕರ್ ಅವರ ವಿಭಾಗೀಯ ಪೀಠವು ಫೆಬ್ರವರಿ 6ರಂದು ಕೊಚ್ಚರ್‌ಗಳ ಬಂಧನವನ್ನು ಕಾನೂನುಬಾಹಿರವೆಂದು ಹೇಳಿತ್ತು, ಅವರಿಗೆ ಜಾಮೀನು ಮಂಜೂರು ಮಾಡಿರುವ ಜನವರಿ 2023ರ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿತ್ತು.

ಕೊಚ್ಚರ್‌ ದಂಪತಿಯನ್ನು ಬಂಧಿಸುವ ನಿರ್ಧಾರ ಬುದ್ದಿ ಅನ್ವಯಿಸದೆ ಮತ್ತು ಕಾನೂನನ್ನು ಪರಿಗಣಿಸದೆ ಮಾಡಿರುವ ಅಧಿಕಾರದ ದುರುಪಯೋಗವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕೊಚ್ಚರ್‌ ದಂಪತಿ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂಬ ಸಿಬಿಐ ವಾದವನ್ನು ಒಪ್ಪಿಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ ಮತ್ತು ವಿಚಾರಣೆಯ ಸಮಯದಲ್ಲಿ ಆರೋಪಿಗಳಿಗೆ ಮೌನವಾಗಿರಲು ಹಕ್ಕಿದೆ ಎಂದು ಹೇಳಿದೆ. ಮೌನದ ಹಕ್ಕನ್ನು ಭಾರತೀಯ ಸಂವಿಧಾನದ 20 (3)ನೇ ವಿಧಿಯು ನೀಡುತ್ತದೆ. ಮೌನವಾಗಿರುವ ಹಕ್ಕನ್ನು ಚಲಾಯಿಸುವುದನ್ನು ಅಸಹಕಾರದೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ದಂಪತಿಯನ್ನು ಡಿಸೆಂಬರ್ 23, 2022ರಂದು ಬಂಧಿಸಲಾಗಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು. ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ ಅಕ್ರಮ ಎಂದು ಫೆಬ್ರವರಿ 6ರ ತೀರ್ಪಿನಲ್ಲಿ ಹೇಳಿತ್ತು.

ಫೆಬ್ರವರಿ 6ರ ಆದೇಶದಲ್ಲಿ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC)ನ ಸೆಕ್ಷನ್ 41Aಯ ಉಲ್ಲಂಘನೆಯನ್ನು ಕೋರ್ಟ್‌ ಗಮನಿಸಿದೆ. ಈ ನಿಬಂಧನೆಯು ಆರೋಪಿಯು ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿದ ಸೂಚನೆಯನ್ನು ಪಾಲಿಸಿದಾಗ ಬಂಧಿಸುವ ಅಧಿಕಾರವನ್ನು ತಡೆಯುತ್ತದೆ ಮತ್ತು ಅಗತ್ಯವೆಂದು ಪೊಲೀಸರು ಅಭಿಪ್ರಾಯಪಟ್ಟಾಗ ಮಾತ್ರ ಬಂಧನವನ್ನು ಮಾಡಬೇಕೆಂದು ಹೇಳುತ್ತದೆ.

ಕೊಚ್ಚರ್‌ಗಳ ವಿರುದ್ಧ ಎಫ್‌ಐಆರ್‌ನ್ನು 2019ರಲ್ಲಿ ದಾಖಲಿಸಲಾಗಿದೆ ಮತ್ತು ಅವರನ್ನು 2022ರಲ್ಲಿ  ವಿಚಾರಣೆಗೆ ಸಮನ್ಸ್‌ ನೀಡಲಾಗಿತ್ತು. ಅಪರಾಧದ ಗಂಭೀರತೆಯ ಹೊರತಾಗಿಯೂ ಅರ್ಜಿದಾರರನ್ನು ಅಪರಾಧದ ನೋಂದಣಿ ದಿನಾಂಕದಿಂದ ಮೂರು ವರ್ಷಗಳವರೆಗೆ ವಿಚಾರಣೆಗೆ ಒಳಪಡಿಸಲಾಗಿಲ್ಲ ಅಥವಾ ಸಮನ್ಸ್ ನೀಡಲಾಗಿಲ್ಲ ಎಂದು ಕೋರ್ಟ್‌ ಗಮನಿಸಿದೆ.

ಏನಿದು ಪ್ರಕರಣ:

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುವುದು ಚಂದಾ ಕೊಚ್ಚರ್‌ಗಳ ವಿರುದ್ಧದ ಆರೋಪವಾಗಿದೆ.

2019ರ ಸಿಬಿಐನ ಪ್ರಥಮ ಮಾಹಿತಿ ವರದಿಯಲ್ಲಿ ಸಾಲದ ವಂಚನೆ ಆರೋಪಿಸಿ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...