Homeಮುಖಪುಟಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ ಆಕ್ರೋಶ

ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

“ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ಅವರ ಬೆಂಬಲಿಗರನ್ನು ಸಿಂಘು ಗಡಿಯಲ್ಲಿ ದೆಹಲಿ ಪೊಲೀಸರು ಬಂಧಿಸಿರುವುದು ಸ್ವೀಕಾರಾರ್ಹವಲ್ಲ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

“ಪರಿಸರ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಮತ್ತು ನೂರಾರು ಲಡಾಕಿಗಳ ಬಂಧನವು ಸ್ವೀಕಾರಾರ್ಹವಲ್ಲ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಲಡಾಖ್‌ನ ಭವಿಷ್ಯಕ್ಕಾಗಿ ನಿಂತಿರುವ ಹಿರಿಯ ನಾಗರಿಕರನ್ನು ದೆಹಲಿಯ ಗಡಿಯಲ್ಲಿ ಏಕೆ ಬಂಧಿಸಲಾಗುತ್ತಿದೆ? ಮೋದಿ ಜೀ, ಈ ‘ಚಕ್ರವ್ಯೂಹ’ ಮುರಿದುಹೋಗುತ್ತದೆ, ಹಾಗೆಯೇ ನಿಮ್ಮ ದುರಹಂಕಾರವೂ ಒಡೆಯುತ್ತದೆ. ನೀವು ಲಡಾಖ್‌ನ ಧ್ವನಿಯನ್ನು ಕೇಳಬೇಕಾಗುತ್ತದೆ” ಎಂದು ಅವರು ಹೇಳಿದರು.

ವಾಂಗ್ಚುಕ್ ಮತ್ತು ಅವರ ಬೆಂಬಲಿಗರನ್ನು ಸೋಮವಾರ ತಡರಾತ್ರಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಗಡಿಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 163 ಅನ್ನು ವಿಧಿಸಲಾಗಿದೆ ಎಂದು ದೆಹಲಿ ಪೊಲೀಸರು ಘೋಷಿಸಿದ್ದಾರೆ.

ವಾಂಗ್ಚುಕ್ ಅವರು ತಮ್ಮ ಬಂಧನದ ಸುದ್ದಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

“ನನ್ನನ್ನು ಬಂಧಿಸಲಾಗಿದೆ.. ದೆಹಲಿ ಗಡಿಯಲ್ಲಿ 150 ಪಾದಯಾತ್ರಿಗಳ ಜೊತೆಗೆ, ನೂರಾರು ಪೋಲೀಸ್ ಪಡೆ, ಕೆಲವರು 1,000 ಎಂದು ಹೇಳುತ್ತಾರೆ. 80 ರ ಹರೆಯದ ಅನೇಕ ಹಿರಿಯ ನಾಗರಿಕರು, ಕೆಲವು ಡಜನ್ ಸೇನಾ ಯೋಧರು ನಮ್ಮನ್ನು ಬಂಧಿಸಿದ್ದು, ನಮ್ಮ ಭವಿಷ್ಯ ಏನಾಗುತ್ತದೆ ತಿಳಿದಿಲ್ಲ. ನಾವು ಬಾಪು ಅವರ ಸಮಾಧಿಯತ್ತ ಅತ್ಯಂತ ಶಾಂತಿಯುತ ಮೆರವಣಿಗೆಯಲ್ಲಿದ್ದೆವು.. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ, ಪ್ರಜಾಪ್ರಭುತ್ವದ ತಾಯಿ… ಹೇ ರಾಮ್!” ಎಂದು ಸೋನಮ್ ವಾಂಗ್ಚುಕ್ ಪೋಸ್ಟ್ ಮಾಡಿದ್ದಾರೆ.

ಹವಾಮಾನ ಕಾರ್ಯಕರ್ತ ವಾಂಗ್‌ಚುಕ್ ಮತ್ತು ಇತರ ಸ್ವಯಂಸೇವಕರು ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಲಡಾಖ್‌ನ ನಾಯಕತ್ವದೊಂದಿಗೆ ಸಂವಾದವನ್ನು ಪುನರಾರಂಭಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಲೇಹ್‌ನಿಂದ ನವದೆಹಲಿಗೆ ಕಾಲ್ನಡಿಗೆಯ ಮೆರವಣಿಗೆಯನ್ನು ಕೈಗೊಂಡರು.

ಲಡಾಖ್ ಅನ್ನು ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರಿಸುವುದು ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ, ಇದು ಸ್ಥಳೀಯ ಜನಸಂಖ್ಯೆಗೆ ತಮ್ಮ ಭೂಮಿ ಮತ್ತು ಸಾಂಸ್ಕೃತಿಕ ಗುರುತನ್ನು ರಕ್ಷಿಸಲು ಕಾನೂನು ಮಾಡುವ ಅಧಿಕಾರವನ್ನು ನೀಡುತ್ತದೆ.

ಮಾರ್ಚ್ 1 ರಂದು ಲೇಹ್‌ನಲ್ಲಿ ಈ ಯಾತ್ರೆ ಪ್ರಾರಂಭವಾಯಿತು. ಇದಕ್ಕೂ ಮೊದಲು, ಸೆಪ್ಟೆಂಬರ್ 14 ರಂದು ಹಿಮಾಚಲ ಪ್ರದೇಶವನ್ನು ತಲುಪಿದಾಗ, ವಾಂಗ್‌ಚುಕ್ ತಮ್ಮ ಪಾದಯಾತ್ರೆ ಉದ್ದೇಶವನ್ನು ಒತ್ತಿ ಹೇಳಿದರು. “ಐದು ವರ್ಷಗಳ ಹಿಂದೆ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ನೆನಪಿಸುವ ಕಾರ್ಯಾಚರಣೆಯಲ್ಲಿದ್ದೇವೆ” ಎಂದು ಅವರು ಹೇಳಿದರು.

ಸೋನಮ್ ವಾಂಗ್‌ಚುಕ್ ಅವರು ಲಡಾಖ್‌ನ ರಾಜ್ಯತ್ವಕ್ಕಾಗಿ, ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್‌ನಡಿಯಲ್ಲಿ ಸೇರ್ಪಡೆಗೊಳ್ಳಲು ಪ್ರತಿಪಾದಿಸಿದ್ದಾರೆ. ಇದು ಬುಡಕಟ್ಟು ಸಮುದಾಯಗಳಿಗೆ ವಿಶೇಷ ಹಕ್ಕುಗಳನ್ನು ನೀಡುತ್ತದೆ. ಮತ್ತು ಲಡಾಖ್‌ಗೆ ಬಲವಾದ ಪರಿಸರ ರಕ್ಷಣೆಗಳನ್ನು ನೀಡುತ್ತದೆ.

ಈ ಹಿಂದೆ, ಲಡಾಖ್‌ನ ದುರ್ಬಲವಾದ ಪರ್ವತ ಪರಿಸರ ಮತ್ತು ಸ್ಥಳೀಯ ಜನರನ್ನು ರಕ್ಷಿಸುವ ಮಹತ್ವದ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲು ಸೋನಮ್ ವಾಂಗ್‌ಚುಕ್ ಲೇಹ್‌ನಲ್ಲಿ ಒಂಬತ್ತು ದಿನಗಳ ಉಪವಾಸವನ್ನು ಪೂರ್ಣಗೊಳಿಸಿದರು.

ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರವನ್ನು ‘ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್’ ಪ್ರತ್ಯೇಕಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.

ಇದನ್ನೂ ಓದಿ; ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...