Homeಮುಖಪುಟ'ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

"ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”ಎಂದು ರಾಜಾ ಪಟೇರಿಯಾ ಸ್ಪಷ್ಟನೆ ನೀಡಿದ್ದರು.

- Advertisement -
- Advertisement -

“ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”  ಎಂದಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.

ಅವರ ವಿವಾದಾತ್ಮಕ ಹೇಳಿಕೆಯ ವಿರುದ್ದ ಸೋಮವಾರ ಎಫ್‌ಐಆರ್ ದಾಖಲಾಗಿತ್ತು. ಇಂದು ಬೆಳಿಗ್ಗೆ ಪನ್ನಾದಲ್ಲಿರುವ ಅವರ ಮನೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಿಜೆಪಿ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಕಾಂಗ್ರೆಸ್ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ರಾಜಾ ಪಟೇರಿಯಾ, “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕೆಂಬ ಅರ್ಥದಲ್ಲಿ ಹೇಳಿದ್ದೆ” ಎಂದಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...