Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...