Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....