Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...