Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...