Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...