Homeಮುಖಪುಟದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರ ಬಂಧನ; ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

ದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರ ಬಂಧನ; ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

- Advertisement -
- Advertisement -

‘ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ’ ಸೇರಿದಂತೆ ಹಲವು ಸಂಘಟನೆಗಳು ಕರೆ ಕೊಟ್ಟಿರುವ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಲಾಗಿದ್ದು, ಮಧ್ಯಪ್ರದೇಶ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ’ ಎಂದು ಆಗ್ರಹಿಸಿದ್ದಾರೆ.

‘ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ’ ಎಂದು ಕೇಂದ್ರ ಸರ್ಕಾರದ ವಿರುಸದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯು, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಯಾಕೆ?

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಿವೆ. ಫೆಬ್ರವರಿ 13ರಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿರುವ ರೈತರು ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ತಮಿಳುನಾಡು ಮತ್ತು ಪಂಜಾಬ್‌ ಸೇರಿದಂತೆ ಹಲವು ರಾಜ್ಯಗಳಿಂದ ದೆಹಲಿಗೆ ತೆರಳುತ್ತಿದ್ದಾರೆ.

ಮೂವರು ಕೇಂದ್ರ ಸಚಿವರಾದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಸೋಮವಾರದ ನಂತರ ಪಂಜಾಬ್ ಮತ್ತು ಹರಿಯಾಣದ ಕೃಷಿ ಸಂಸ್ಥೆಗಳೊಂದಿಗೆ ಸಭೆ ನಡೆಸಲಿದ್ದಾರೆ.

ರೈತರ ಬೇಡಿಕೆಗಳೇನು?

ರೈತರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಕೇಂದ್ರಕ್ಕೆ ಒಪ್ಪಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಸಂಸ್ಥೆಗಳು ಕನಿಷ್ಟ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಒತ್ತಾಯಿಸುತ್ತಿವೆ. ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ಹಿಂತೆಗೆದುಕೊಳ್ಳಲು ಅವರು ಒಪ್ಪಿಕೊಂಡಾಗ ಅವರು 2021 ರಲ್ಲಿ ನಿಗದಿಪಡಿಸಿದ ಪ್ರಮುಖ ಷರತ್ತು ಇದಾಗಿದೆ.

ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಮತ್ತು ಕೃಷಿ ಸಾಲ ಮನ್ನಾ ಮಾಡಬೇಕು. ರೈತರ ಪ್ರಕಾರ, ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ಕೇಂದ್ರವು “ನ್ಯಾಯ” ಒದಗಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಪೊಲೀಸರು ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಿದ್ದಾರೆ. ಪ್ರತಿಭಟನಾಕಾರರನ್ನು ಹೊತ್ತ ವಾಹನಗಳು ನಗರಕ್ಕೆ ಪ್ರವೇಶಿಸದಂತೆ ಬ್ಯಾರಿಕೇಡ್‌ಗಳ ಜೊತೆಗೆ ಮೊಳೆಗಳನ್ನು ಅಳವಡಿಸಿದ್ದಾರೆ. ಇದರೊಂದಿಗೆ ರಸ್ತೆ ತಡೆಗಾಗಿ ದೊಡ್ಡ ಕಂಟೈನರ್‌ಗಳನ್ನು ಹೊತ್ತ ಕ್ರೇನ್‌ಗಳು ಮತ್ತು ಮಣ್ಣು ತೆಗೆಯುವ ಯಂತ್ರಗಳು ಸಹ ಕಾರ್ಯನಿರ್ವಹಿಸುತ್ತಿವೆ.

ಯುಪಿ ಗಡಿಯಲ್ಲಿ ಸೆಕ್ಷನ್ 144 ಜಾರಿ:

ರೈತರ ಪ್ರತಿಭಟನೆಯ ನಡುವೆ, ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಉತ್ತರ ಪ್ರದೇಶದ ಗಡಿಯಲ್ಲಿ ದೆಹಲಿ ಪೊಲೀಸರು ಭಾನುವಾರ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ಗಡಿಯಲ್ಲಿ 50 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ನಡುವೆ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಎಂಬ ಏಳು ಜಿಲ್ಲೆಗಳಲ್ಲಿ ಫೆಬ್ರವರಿ 13 ರವರೆಗೆ ಇಂಟರ್ನೆಟ್ ಸೇವೆಗಳು ಮತ್ತು ಬೃಹತ್ ಎಸ್‌ಎಂಎಸ್ ಅನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...