Homeಮುಖಪುಟದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರ ಬಂಧನ; ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

ದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರ ಬಂಧನ; ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

- Advertisement -
- Advertisement -

‘ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ’ ಸೇರಿದಂತೆ ಹಲವು ಸಂಘಟನೆಗಳು ಕರೆ ಕೊಟ್ಟಿರುವ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಲಾಗಿದ್ದು, ಮಧ್ಯಪ್ರದೇಶ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ’ ಎಂದು ಆಗ್ರಹಿಸಿದ್ದಾರೆ.

‘ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ’ ಎಂದು ಕೇಂದ್ರ ಸರ್ಕಾರದ ವಿರುಸದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯು, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಯಾಕೆ?

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಿವೆ. ಫೆಬ್ರವರಿ 13ರಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿರುವ ರೈತರು ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ತಮಿಳುನಾಡು ಮತ್ತು ಪಂಜಾಬ್‌ ಸೇರಿದಂತೆ ಹಲವು ರಾಜ್ಯಗಳಿಂದ ದೆಹಲಿಗೆ ತೆರಳುತ್ತಿದ್ದಾರೆ.

ಮೂವರು ಕೇಂದ್ರ ಸಚಿವರಾದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಸೋಮವಾರದ ನಂತರ ಪಂಜಾಬ್ ಮತ್ತು ಹರಿಯಾಣದ ಕೃಷಿ ಸಂಸ್ಥೆಗಳೊಂದಿಗೆ ಸಭೆ ನಡೆಸಲಿದ್ದಾರೆ.

ರೈತರ ಬೇಡಿಕೆಗಳೇನು?

ರೈತರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಕೇಂದ್ರಕ್ಕೆ ಒಪ್ಪಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಸಂಸ್ಥೆಗಳು ಕನಿಷ್ಟ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಒತ್ತಾಯಿಸುತ್ತಿವೆ. ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ಹಿಂತೆಗೆದುಕೊಳ್ಳಲು ಅವರು ಒಪ್ಪಿಕೊಂಡಾಗ ಅವರು 2021 ರಲ್ಲಿ ನಿಗದಿಪಡಿಸಿದ ಪ್ರಮುಖ ಷರತ್ತು ಇದಾಗಿದೆ.

ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಮತ್ತು ಕೃಷಿ ಸಾಲ ಮನ್ನಾ ಮಾಡಬೇಕು. ರೈತರ ಪ್ರಕಾರ, ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ಕೇಂದ್ರವು “ನ್ಯಾಯ” ಒದಗಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಪೊಲೀಸರು ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಿದ್ದಾರೆ. ಪ್ರತಿಭಟನಾಕಾರರನ್ನು ಹೊತ್ತ ವಾಹನಗಳು ನಗರಕ್ಕೆ ಪ್ರವೇಶಿಸದಂತೆ ಬ್ಯಾರಿಕೇಡ್‌ಗಳ ಜೊತೆಗೆ ಮೊಳೆಗಳನ್ನು ಅಳವಡಿಸಿದ್ದಾರೆ. ಇದರೊಂದಿಗೆ ರಸ್ತೆ ತಡೆಗಾಗಿ ದೊಡ್ಡ ಕಂಟೈನರ್‌ಗಳನ್ನು ಹೊತ್ತ ಕ್ರೇನ್‌ಗಳು ಮತ್ತು ಮಣ್ಣು ತೆಗೆಯುವ ಯಂತ್ರಗಳು ಸಹ ಕಾರ್ಯನಿರ್ವಹಿಸುತ್ತಿವೆ.

ಯುಪಿ ಗಡಿಯಲ್ಲಿ ಸೆಕ್ಷನ್ 144 ಜಾರಿ:

ರೈತರ ಪ್ರತಿಭಟನೆಯ ನಡುವೆ, ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಉತ್ತರ ಪ್ರದೇಶದ ಗಡಿಯಲ್ಲಿ ದೆಹಲಿ ಪೊಲೀಸರು ಭಾನುವಾರ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ಗಡಿಯಲ್ಲಿ 50 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ನಡುವೆ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಎಂಬ ಏಳು ಜಿಲ್ಲೆಗಳಲ್ಲಿ ಫೆಬ್ರವರಿ 13 ರವರೆಗೆ ಇಂಟರ್ನೆಟ್ ಸೇವೆಗಳು ಮತ್ತು ಬೃಹತ್ ಎಸ್‌ಎಂಎಸ್ ಅನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...