Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...