Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...