Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...