Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...